<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮನಪರಿವರ್ತನೆಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಕಾರಾಗೃಹ ಸಿಬ್ಬಂದಿ ಹಾಗೂ ಕೈದಿಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಯಿತು.</p>.<p>ಕಾರಾಗೃಹದೊಳಗಿನ ಆವರಣದಲ್ಲಿರುವ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಸಿಬ್ಬಂದಿ ಹಾಗೂ ಕೈದಿಗಳ ತಂಡಗಳು ಕ್ರಿಕೆಟ್ ಪಂದ್ಯವನ್ನಾಡಿದರು. ಇದರಲ್ಲಿ ಸಿಬ್ಬಂದಿ ತಂಡ ವಿಜಯಶಾಲಿಯಾಯಿತು.</p>.<p>ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಮೈದಾನದ ಸುತ್ತಲು ಹೆಚ್ಚಿನ ಸಂಖ್ಯೆಯಲ್ಲಿ ಕೈದಿಗಳು ಜಮಾಯಿಸಿದ್ದರು. ಚಪ್ಪಾಳೆ ತಟ್ಟಿ ಎರಡೂ ತಂಡಗಳ ಆಟಗಾರರನ್ನು ಹುರಿದುಂಬಿಸಿದರು. ಕೆಲ ಕೈದಿಗಳು, ಬ್ಯಾಟಿಂಗ್ ಹಾಗೂ ಬಾಲಿಂಗ್ನಲ್ಲಿ ಉತ್ತಮ ಪ್ರದರ್ಶನ ತೋರಿದರು. ಆದರೆ, ಸಿಬ್ಬಂದಿ ತಂಡದವರ ಪ್ರದರ್ಶನದ ಎದುರು ಸೋಲುಪ್ಪಿಕೊಂಡರು.</p>.<p>‘ಕ್ರೀಡೆಯಿಂದ ಆರೋಗ್ಯ, ಆರೋಗ್ಯದಿಂದ ಉತ್ತಮ ಆಯುಷ್ಯ’ ಎಂಬ ಮಾತಿನಂತೆ, ಜೈಲಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಳಾಗುತ್ತಿದೆ. ಶನಿವಾರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೈದಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು’ ಎಂದು ಜೈಲಿನ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮನಪರಿವರ್ತನೆಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಕಾರಾಗೃಹ ಸಿಬ್ಬಂದಿ ಹಾಗೂ ಕೈದಿಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಯಿತು.</p>.<p>ಕಾರಾಗೃಹದೊಳಗಿನ ಆವರಣದಲ್ಲಿರುವ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಸಿಬ್ಬಂದಿ ಹಾಗೂ ಕೈದಿಗಳ ತಂಡಗಳು ಕ್ರಿಕೆಟ್ ಪಂದ್ಯವನ್ನಾಡಿದರು. ಇದರಲ್ಲಿ ಸಿಬ್ಬಂದಿ ತಂಡ ವಿಜಯಶಾಲಿಯಾಯಿತು.</p>.<p>ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಮೈದಾನದ ಸುತ್ತಲು ಹೆಚ್ಚಿನ ಸಂಖ್ಯೆಯಲ್ಲಿ ಕೈದಿಗಳು ಜಮಾಯಿಸಿದ್ದರು. ಚಪ್ಪಾಳೆ ತಟ್ಟಿ ಎರಡೂ ತಂಡಗಳ ಆಟಗಾರರನ್ನು ಹುರಿದುಂಬಿಸಿದರು. ಕೆಲ ಕೈದಿಗಳು, ಬ್ಯಾಟಿಂಗ್ ಹಾಗೂ ಬಾಲಿಂಗ್ನಲ್ಲಿ ಉತ್ತಮ ಪ್ರದರ್ಶನ ತೋರಿದರು. ಆದರೆ, ಸಿಬ್ಬಂದಿ ತಂಡದವರ ಪ್ರದರ್ಶನದ ಎದುರು ಸೋಲುಪ್ಪಿಕೊಂಡರು.</p>.<p>‘ಕ್ರೀಡೆಯಿಂದ ಆರೋಗ್ಯ, ಆರೋಗ್ಯದಿಂದ ಉತ್ತಮ ಆಯುಷ್ಯ’ ಎಂಬ ಮಾತಿನಂತೆ, ಜೈಲಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಳಾಗುತ್ತಿದೆ. ಶನಿವಾರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೈದಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು’ ಎಂದು ಜೈಲಿನ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>