ವಿವಿಧ ವಿಶ್ವವಿದ್ಯಾಲಯಗಳು ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ ಅಂಕಗಳನ್ನು ನೀಡುವಲ್ಲಿ ಹಲವಾರು ವ್ಯತ್ಯಾಸಗಳಿವೆ. ಕೆಲವು ಸಂಸ್ಥೆಗಳಲ್ಲಿ ಕಠಿಣ ಪದ್ಧತಿ ಅನುಸರಿಸಿದರೆ, ಕೆಲವೆಡೆ ಉದಾರವಾಗಿ ಅಂಕಗಳನ್ನು ನೀಡಲಾಗುತ್ತಿದೆ. ಇಂತಹ ತಾರತಮ್ಯಗಳನ್ನು ನಿವಾರಿಸಲು ಸಿಇಟಿ ಅಗತ್ಯವಾಗಿದೆ ಎಂದು ಪ್ರತಿಪಾದಿಸಲಾಗಿದೆ. ‘ಒಂದು ಬಾರಿ ಈ ಪದ್ಧತಿ ಅನುಷ್ಠಾನಗೊಂಡರೆ ಸಿಇಟಿಯಲ್ಲಿ ಅರ್ಹರಾದವರು ಮಾತ್ರ ವಿಶ್ವವಿದ್ಯಾಲಯದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ’ ಎಂದುಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ ತಿಳಿಸಿದ್ದಾರೆ.