<p><strong>ಬೆಂಗಳೂರು</strong>: ಒಂಟಿ ಮಹಿಳೆಯರಿಂದ ಚಿನ್ನದ ಸರಗಳನ್ನು ದೋಚಿ, ಅವುಗಳನ್ನು ಮಾರಿದ ಹಣದಲ್ಲಿ ಕುದುರೆ ರೇಸ್ ಆಡುತ್ತಿದ್ದ ಆರೋಪಿಗಳು ವಿಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಲಗ್ಗೆರೆಯ ಚೌಡೇಶ್ವರಿ ನಗರ ನಿವಾಸಿ ಕೆ.ಪ್ರದೀಪ್, ಕಬ್ಬನ್ ಪೇಟೆಯ ಮಂಜುನಾಥ್ ಬಂಧಿತ ಸರಗಳ್ಳರು. ಇವರು ಕದ್ದು ತರುತ್ತಿದ್ದ ಒಡವೆಗಳನ್ನು ವಿಲೇವಾರಿ ಮಾಡುತ್ತಿದ್ದ ಪ್ರದೀಪ್ನ ಸಂಬಂಧಿ ಚೋಳರಪಾಳ್ಯದ ಸುನೀಲ್ ಸಹ ಜೈಲು ಸೇರಿದ್ದಾನೆ. ಆರೋಪಿಗಳಿಂದ ₹ 8 ಲಕ್ಷ ಮೌಲ್ಯದ 265 ಗ್ರಾಂ ಚಿನ್ನಾಭರಣ ಹಾಗೂ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ವಿಜಯನಗರ ಹಾಗೂ ಆರ್ಪಿಸಿ ಲೇಔಟ್ನಲ್ಲಿ ಮೇಲಿಂದ ಮೇಲೆ ಸರಗಳವು ಕೃತ್ಯಗಳು ನಡೆಯುತ್ತಲೇ ಇದ್ದವು. ಹೀಗಾಗಿ, ಆ ಭಾಗದಲ್ಲಿ ಮಹಿಳೆಯರ ಸುರಕ್ಷತೆಗೆ ವಿಶೇಷ ನಿಗಾ ವಹಿಸುವಂತೆ ಹಾಗೂ ಸರಗಳ್ಳರನ್ನು ಪತ್ತೆ ಮಾಡುವಂತೆ ಎಸಿಪಿ ಎಚ್.ಎನ್.ಧರ್ಮೇಂದ್ರಯ್ಯ ಉಸ್ತುವಾರಿಯಲ್ಲಿ ಡಿಸಿಪಿ ವಿಶೇಷ ತಂಡ ರಚಿಸಿದ್ದರು. ಸಿ.ಸಿ ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ ಬೈಕ್ನ ನೋಂದಣಿ ಸಂಖ್ಯೆ ಸಿಕ್ಕಿತು. ಆ ಸುಳಿವಿನ ಮೇರೆಗೆ ಪ್ರಕರಣ ಭೇದಿಸಲಾಯಿತು’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಒಂಟಿ ಮಹಿಳೆಯರಿಂದ ಚಿನ್ನದ ಸರಗಳನ್ನು ದೋಚಿ, ಅವುಗಳನ್ನು ಮಾರಿದ ಹಣದಲ್ಲಿ ಕುದುರೆ ರೇಸ್ ಆಡುತ್ತಿದ್ದ ಆರೋಪಿಗಳು ವಿಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಲಗ್ಗೆರೆಯ ಚೌಡೇಶ್ವರಿ ನಗರ ನಿವಾಸಿ ಕೆ.ಪ್ರದೀಪ್, ಕಬ್ಬನ್ ಪೇಟೆಯ ಮಂಜುನಾಥ್ ಬಂಧಿತ ಸರಗಳ್ಳರು. ಇವರು ಕದ್ದು ತರುತ್ತಿದ್ದ ಒಡವೆಗಳನ್ನು ವಿಲೇವಾರಿ ಮಾಡುತ್ತಿದ್ದ ಪ್ರದೀಪ್ನ ಸಂಬಂಧಿ ಚೋಳರಪಾಳ್ಯದ ಸುನೀಲ್ ಸಹ ಜೈಲು ಸೇರಿದ್ದಾನೆ. ಆರೋಪಿಗಳಿಂದ ₹ 8 ಲಕ್ಷ ಮೌಲ್ಯದ 265 ಗ್ರಾಂ ಚಿನ್ನಾಭರಣ ಹಾಗೂ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ವಿಜಯನಗರ ಹಾಗೂ ಆರ್ಪಿಸಿ ಲೇಔಟ್ನಲ್ಲಿ ಮೇಲಿಂದ ಮೇಲೆ ಸರಗಳವು ಕೃತ್ಯಗಳು ನಡೆಯುತ್ತಲೇ ಇದ್ದವು. ಹೀಗಾಗಿ, ಆ ಭಾಗದಲ್ಲಿ ಮಹಿಳೆಯರ ಸುರಕ್ಷತೆಗೆ ವಿಶೇಷ ನಿಗಾ ವಹಿಸುವಂತೆ ಹಾಗೂ ಸರಗಳ್ಳರನ್ನು ಪತ್ತೆ ಮಾಡುವಂತೆ ಎಸಿಪಿ ಎಚ್.ಎನ್.ಧರ್ಮೇಂದ್ರಯ್ಯ ಉಸ್ತುವಾರಿಯಲ್ಲಿ ಡಿಸಿಪಿ ವಿಶೇಷ ತಂಡ ರಚಿಸಿದ್ದರು. ಸಿ.ಸಿ ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ ಬೈಕ್ನ ನೋಂದಣಿ ಸಂಖ್ಯೆ ಸಿಕ್ಕಿತು. ಆ ಸುಳಿವಿನ ಮೇರೆಗೆ ಪ್ರಕರಣ ಭೇದಿಸಲಾಯಿತು’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>