‘ಬೌನ್ಸ್ ಕಂಪನಿಯ ಬಾಡಿಗೆ ದ್ವಿಚಕ್ರ ವಾಹನದಲ್ಲಿ ಬೃಂದಾವನ್ ಲೇಔಟ್ಗೆ ಇದೇ 12ರಂದು ರಾತ್ರಿ ಬಂದಿದ್ದ ಮೂವರು ದುಷ್ಕರ್ಮಿಗಳು, ಸ್ಥಳೀಯ ನಿವಾಸಿ ಸುಧಾ ಎಂಬುವರ ಚಿನ್ನದ ಸರ ಕಿತ್ತುಕೊಂಡಿದ್ದರು. ಮಹಿಳೆ ಚೀರಾಡುತ್ತಿದ್ದಂತೆ ಸಹಾಯಕ್ಕೆ ಬಂದಿದ್ದ ಸ್ಥಳೀಯರು, ದುಷ್ಕರ್ಮಿಗಳಿದ್ದ ವಾಹನವನ್ನು ಬೆನ್ನಟ್ಟಿದ್ದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.