ಬೆಂಗಳೂರು: ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ಯಲಾಗಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
‘ಸ್ಥಳೀಯ ನಿವಾಸಿ 30 ವರ್ಷದ ಮಹಿಳೆ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಮಹಿಳೆ ಉಲ್ಲಾಳ ಮುಖ್ಯರಸ್ತೆಯ ಮಂಗನಹಳ್ಳಿ ವೃತ್ತದ ಅಯ್ಯಪ್ಪ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ನ. 9ರಂದು ರಾತ್ರಿ 8.35ರ ಸುಮಾರಿಗೆ ನಡೆದುಕೊಂಡು ಹೊರಟಿದ್ದಾಗ ಕೃತ್ಯ ನಡೆದಿದೆ.
‘ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಆರೋಪಿ ಮಹಿಳೆ ಧರಿಸಿದ್ದ 70 ಗ್ರಾಂ ತೂಕದ ಚಿನ್ನದ ಸರ ಎಳೆದಿದ್ದು, ಸರ ತುಂಡಾಗಿತ್ತು. 48 ಗ್ರಾಂ ತೂಕದ ಅರ್ಧ ಸರದ ಸಮೇತ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.