‘ಏಕಾಏಕಿ ಮನೆಗೆ ನುಗ್ಗಿದ ಆರೋಪಿ, ಮಹಿಳೆಯ ಚಿನ್ನದ ಸರ ಕಿತ್ತುಕೊಂಡಿದ್ದ. ಎಚ್ಚರಗೊಂಡ ರಮ್ಯ, ಚೀರಾಡಲಾರಂಭಿಸಿದ್ದರು. ಅದನ್ನು ಕೇಳಿಸಿಕೊಂಡ ಭರತ್, ಮನೆಯತ್ತ ಹೊರಟಿದ್ದಾಗಲೇ ಮಣಿಕಂಠ ಓಡಿಹೋಗುತ್ತಿರುವುದನ್ನು ನೋಡಿದ್ದರು. ನಂತರ, ಆತನನ್ನು ಬೆನ್ನಟ್ಟಿ ಸ್ಥಳೀಯರ ಸಹಾಯದಿಂದ ಹಿಡಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.