<p><strong>ಬೆಂಗಳೂರು: </strong>ಚಾಮರಾಜಪೇಟೆಯ ನಿವಾಸಿ ರಮ್ಯ ಎಂಬುವರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದ ಕಳ್ಳನನ್ನು, ಅವರ ಪತಿ ಭರತ್ ಎಂಬುವರೇ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಆರೋಪಿ ತಮಿಳುನಾಡಿನ ಮಣಿಕಂಠ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಆತ, ಕೂಲಿ ಕಾರ್ಮಿಕ ಎಂದು ಗೊತ್ತಾಗಿದೆ.</p>.<p>‘ಚಾಮರಾಜಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯ ಮೊದಲ ಮಹಡಿಯಲ್ಲಿ ಭರತ್ ಹಾಗೂ ರಮ್ಯ ದಂಪತಿ ನೆಲೆಸಿದ್ದಾರೆ. ನೆಲಮಹಡಿಯಲ್ಲಿ ಭರತ್ ಅವರ ತಂದೆ- ತಾಯಿ ಇದ್ದಾರೆ. ಭಾನುವಾರ ರಾತ್ರಿ ಭರತ್, ಪೋಷಕರ ಮನೆಗೆ ಹೋಗಿದ್ದರು. ಅದೇ ವೇಳೆ ರಮ್ಯ, ಮನೆಯ ಬಾಗಿಲು ಹಾಕಿಕೊಳ್ಳದೆ ಮಲಗಿದ್ದರು’ ಎಂದು ಪೊಲೀಸರು ವಿವರಿಸಿದರು.</p>.<p>‘ಏಕಾಏಕಿ ಮನೆಗೆ ನುಗ್ಗಿದ ಆರೋಪಿ, ಮಹಿಳೆಯ ಚಿನ್ನದ ಸರ ಕಿತ್ತುಕೊಂಡಿದ್ದ. ಎಚ್ಚರಗೊಂಡ ರಮ್ಯ, ಚೀರಾಡಲಾರಂಭಿಸಿದ್ದರು. ಅದನ್ನು ಕೇಳಿಸಿಕೊಂಡ ಭರತ್, ಮನೆಯತ್ತ ಹೊರಟಿದ್ದಾಗಲೇ ಮಣಿಕಂಠ ಓಡಿಹೋಗುತ್ತಿರುವುದನ್ನು ನೋಡಿದ್ದರು. ನಂತರ, ಆತನನ್ನು ಬೆನ್ನಟ್ಟಿ ಸ್ಥಳೀಯರ ಸಹಾಯದಿಂದ ಹಿಡಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಾಮರಾಜಪೇಟೆಯ ನಿವಾಸಿ ರಮ್ಯ ಎಂಬುವರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದ ಕಳ್ಳನನ್ನು, ಅವರ ಪತಿ ಭರತ್ ಎಂಬುವರೇ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಆರೋಪಿ ತಮಿಳುನಾಡಿನ ಮಣಿಕಂಠ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಆತ, ಕೂಲಿ ಕಾರ್ಮಿಕ ಎಂದು ಗೊತ್ತಾಗಿದೆ.</p>.<p>‘ಚಾಮರಾಜಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯ ಮೊದಲ ಮಹಡಿಯಲ್ಲಿ ಭರತ್ ಹಾಗೂ ರಮ್ಯ ದಂಪತಿ ನೆಲೆಸಿದ್ದಾರೆ. ನೆಲಮಹಡಿಯಲ್ಲಿ ಭರತ್ ಅವರ ತಂದೆ- ತಾಯಿ ಇದ್ದಾರೆ. ಭಾನುವಾರ ರಾತ್ರಿ ಭರತ್, ಪೋಷಕರ ಮನೆಗೆ ಹೋಗಿದ್ದರು. ಅದೇ ವೇಳೆ ರಮ್ಯ, ಮನೆಯ ಬಾಗಿಲು ಹಾಕಿಕೊಳ್ಳದೆ ಮಲಗಿದ್ದರು’ ಎಂದು ಪೊಲೀಸರು ವಿವರಿಸಿದರು.</p>.<p>‘ಏಕಾಏಕಿ ಮನೆಗೆ ನುಗ್ಗಿದ ಆರೋಪಿ, ಮಹಿಳೆಯ ಚಿನ್ನದ ಸರ ಕಿತ್ತುಕೊಂಡಿದ್ದ. ಎಚ್ಚರಗೊಂಡ ರಮ್ಯ, ಚೀರಾಡಲಾರಂಭಿಸಿದ್ದರು. ಅದನ್ನು ಕೇಳಿಸಿಕೊಂಡ ಭರತ್, ಮನೆಯತ್ತ ಹೊರಟಿದ್ದಾಗಲೇ ಮಣಿಕಂಠ ಓಡಿಹೋಗುತ್ತಿರುವುದನ್ನು ನೋಡಿದ್ದರು. ನಂತರ, ಆತನನ್ನು ಬೆನ್ನಟ್ಟಿ ಸ್ಥಳೀಯರ ಸಹಾಯದಿಂದ ಹಿಡಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>