‘ಹೆಣ್ಣೂರು, ಆವಲಹಳ್ಳಿ, ಗಿರಿನಗರ, ಹೆಬ್ಬಾಳ, ರಾಮಮೂರ್ತಿನಗರ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 9 ಸರಗಳವು ಪ್ರಕರಣಗಳಲ್ಲಿ ಆತ ಭಾಗಿಯಾಗಿರುವುದು ತನಿಖೆಯಿಂದ ಗೊತ್ತಾಗಿದೆ. ಇದಕ್ಕೂ ಮುನ್ನ ಆತನ ವಿರುದ್ಧ 23 ಪ್ರಕರಣಗಳು ದಾಖಲಾಗಿದ್ದವು. ಜೆ.ಪಿ.ನಗರ, ಬನಶಂಕರಿ, ಬಾಣಸವಾಡಿ ಸೇರಿದಂತೆ ವಿವಿಧೆಡೆ ನಡೆದಿರುವ ಕಳ್ಳತನ ಪ್ರಕರಣಗಳಲ್ಲೂ ಆತ ಪಾಲ್ಗೊಂಡಿದ್ದ. 2018ರಲ್ಲಿ ನಡೆದಿದ್ದ ಎರಡು ಕಳವು ಪ್ರಕರಣಗಳಲ್ಲಿಹೆಣ್ಣೂರು ಪೊಲೀಸರು ಆತನನ್ನು ಬಂಧಿಸಿದ್ದರು. ನಂತರವೂ ಆತ ಸರಗಳವು ಮುಂದುವರಿಸಿದ್ದ. ತನ್ನ ಇರುವಿಕೆಯ ಮಾಹಿತಿ ಪೊಲೀಸರಿಗೆ ಸಿಗಬಾರದು ಎಂಬ ಕಾರಣಕ್ಕೆ ಆಗಾಗ ಮನೆ ಬದಲಿಸುತ್ತಿದ್ದ’ ಎಂದು ಮಾಹಿತಿ ನೀಡಿದ್ದಾರೆ.