<p><strong>ಬೆಂಗಳೂರು:</strong> ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಬಂದು ಮಹಿಳೆಯ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಜೆ.ಪಿ. ನಗರದ ಅರುಣ್ ಮತ್ತು ಆಂಧ್ರಪ್ರದೇಶದ ವೆಂಕಟ್ ಬಂಧಿತರು. ಆರೋಪಿಗಳಿಂದ ₹9.24 ಲಕ್ಷ ಮೌಲ್ಯದ 66 ಗ್ರಾಂ ಚಿನ್ನಾಭರಣ, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ವಿಲಾಸಿ ಜೀವನ ನಡೆಸುತ್ತಿದ್ದ ಆರೋಪಿಗಳು ನಗರದೆಲ್ಲೆಡೆ ಸುತ್ತಾಡಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳವು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜನವರಿ 27ರಂದು ಸಂಜೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು, ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಮೊಮ್ಮಗಳನ್ನು ಎತ್ತಿಕೊಂಡು ನಿಂತಿದ್ದ ಮಹಿಳೆಯನ್ನು ಮಾತನಾಡಿಸಿದ್ದಾರೆ. ಆಕೆಯ ಗಮನವನ್ನು ಬೇರೆಡೆ ಸೆಳೆದು 58.43 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನದಿಂದ ಹೆಬ್ಬಾಳ ಠಾಣೆ, ಆರ್ಎಂಸಿ ಯಾರ್ಡ್ ಠಾಣೆಯ ತಲಾ ಒಂದು ಸರ ಅಪಹರಣ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಬಂದು ಮಹಿಳೆಯ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಜೆ.ಪಿ. ನಗರದ ಅರುಣ್ ಮತ್ತು ಆಂಧ್ರಪ್ರದೇಶದ ವೆಂಕಟ್ ಬಂಧಿತರು. ಆರೋಪಿಗಳಿಂದ ₹9.24 ಲಕ್ಷ ಮೌಲ್ಯದ 66 ಗ್ರಾಂ ಚಿನ್ನಾಭರಣ, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ವಿಲಾಸಿ ಜೀವನ ನಡೆಸುತ್ತಿದ್ದ ಆರೋಪಿಗಳು ನಗರದೆಲ್ಲೆಡೆ ಸುತ್ತಾಡಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳವು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜನವರಿ 27ರಂದು ಸಂಜೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು, ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಮೊಮ್ಮಗಳನ್ನು ಎತ್ತಿಕೊಂಡು ನಿಂತಿದ್ದ ಮಹಿಳೆಯನ್ನು ಮಾತನಾಡಿಸಿದ್ದಾರೆ. ಆಕೆಯ ಗಮನವನ್ನು ಬೇರೆಡೆ ಸೆಳೆದು 58.43 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನದಿಂದ ಹೆಬ್ಬಾಳ ಠಾಣೆ, ಆರ್ಎಂಸಿ ಯಾರ್ಡ್ ಠಾಣೆಯ ತಲಾ ಒಂದು ಸರ ಅಪಹರಣ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>