<p><strong>ಬೆಂಗಳೂರು:</strong> ರಸ್ತೆಯಲ್ಲಿ ಹೋಗುವ ಯುವಕರನ್ನು ತಬ್ಬಿಕೊಂಡು ಅವರ ಚಿನ್ನದ ಸರ ಕಳ್ಳತನ ಮಾಡುತ್ತಿದ್ದ ಆರೋಪಿ ಜೂಲಿ ಅಲಿಯಾಸ್ ಕೃಷ್ಣ (40) ಎಂಬುವವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.</p>.<p>‘ಸುಂಕದಕಟ್ಟೆ ನಿವಾಸಿ ಜೂಲಿ ತೃತೀಯ ಲಿಂಗಿ. ಐಷಾರಾಮಿ ಕಾರು ಹೊಂದಿರುವ ಯುವಕರನ್ನು ಗುರುತಿಸಿ ಕೃತ್ಯ ಎಸಗುತ್ತಿದ್ದರು. ಇವರಿಂದ 44 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಉದ್ಯಮಿ ವಿಶ್ವಾಸ್ ಎಂಬುವವರು ಸ್ನೇಹಿತರ ಜೊತೆ ಜುಲೈ 5ರ ರಾತ್ರಿ ಬ್ರಿಗೇಡ್ ರಸ್ತೆಗೆ ಬಂದಿದ್ದರು. ಬಾರ್ ಆ್ಯಂಡ್ ರೆಸ್ಟೊರೆಂಟ್ವೊಂದರಲ್ಲಿ ಊಟ ಮುಗಿಸಿಕೊಂಡು ಕಾರು ನಿಲ್ಲಿಸಿದ್ದ ಪಾರ್ಕಿಂಗ್ ಸ್ಥಳಕ್ಕೆ ಬಂದಿದ್ದರು.’</p>.<p>‘ಸ್ಥಳದಲ್ಲಿದ್ದ ಆರೋಪಿ ಡ್ರಾಪ್ ಕೇಳುವ ನೆಪದಲ್ಲಿ ವಿಶ್ವಾಸ್ ಅವರನ್ನು ಮಾತನಾಡಿಸಿದ್ದರು. ನಂತರ ಒಂದು ನಿಮಿಷ ಗಟ್ಟಿಯಾಗಿ ತಬ್ಬಿಕೊಂಡಿದ್ದರು. ಅದೇ ವೇಳೆಯೇ ಕೊರಳಲ್ಲಿದ್ದ ₹1 ಲಕ್ಷ ಮೌಲ್ಯದ ಚಿನ್ನದ ಸರ ಬಿಚ್ಚಿಕೊಂಡು ಸ್ಥಳದಿಂದ ಹೊರಟು ಹೋಗಿದ್ದರು. ಕೆಲ ನಿಮಿಷಗಳ ನಂತರ ಚಿನ್ನದ ಸರ ಕಂಡಿರಲಿಲ್ಲ. ತಬ್ಬಿಕೊಂಡವರ ಮೇಲೆಯೇ ಅನುಮಾನ ವ್ಯಕ್ತಪಡಿಸಿ ವಿಶ್ವಾಸ್ ದೂರು ನೀಡಿದ್ದರು’ ಎಂದು ತಿಳಿಸಿವೆ.</p>.<p>‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಹಾಗೂ ಇತರೆ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು. ಇದೇ ಆರೋಪಿ ಎರಡು ಕಡೆ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸ್ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆಯಲ್ಲಿ ಹೋಗುವ ಯುವಕರನ್ನು ತಬ್ಬಿಕೊಂಡು ಅವರ ಚಿನ್ನದ ಸರ ಕಳ್ಳತನ ಮಾಡುತ್ತಿದ್ದ ಆರೋಪಿ ಜೂಲಿ ಅಲಿಯಾಸ್ ಕೃಷ್ಣ (40) ಎಂಬುವವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.</p>.<p>‘ಸುಂಕದಕಟ್ಟೆ ನಿವಾಸಿ ಜೂಲಿ ತೃತೀಯ ಲಿಂಗಿ. ಐಷಾರಾಮಿ ಕಾರು ಹೊಂದಿರುವ ಯುವಕರನ್ನು ಗುರುತಿಸಿ ಕೃತ್ಯ ಎಸಗುತ್ತಿದ್ದರು. ಇವರಿಂದ 44 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಉದ್ಯಮಿ ವಿಶ್ವಾಸ್ ಎಂಬುವವರು ಸ್ನೇಹಿತರ ಜೊತೆ ಜುಲೈ 5ರ ರಾತ್ರಿ ಬ್ರಿಗೇಡ್ ರಸ್ತೆಗೆ ಬಂದಿದ್ದರು. ಬಾರ್ ಆ್ಯಂಡ್ ರೆಸ್ಟೊರೆಂಟ್ವೊಂದರಲ್ಲಿ ಊಟ ಮುಗಿಸಿಕೊಂಡು ಕಾರು ನಿಲ್ಲಿಸಿದ್ದ ಪಾರ್ಕಿಂಗ್ ಸ್ಥಳಕ್ಕೆ ಬಂದಿದ್ದರು.’</p>.<p>‘ಸ್ಥಳದಲ್ಲಿದ್ದ ಆರೋಪಿ ಡ್ರಾಪ್ ಕೇಳುವ ನೆಪದಲ್ಲಿ ವಿಶ್ವಾಸ್ ಅವರನ್ನು ಮಾತನಾಡಿಸಿದ್ದರು. ನಂತರ ಒಂದು ನಿಮಿಷ ಗಟ್ಟಿಯಾಗಿ ತಬ್ಬಿಕೊಂಡಿದ್ದರು. ಅದೇ ವೇಳೆಯೇ ಕೊರಳಲ್ಲಿದ್ದ ₹1 ಲಕ್ಷ ಮೌಲ್ಯದ ಚಿನ್ನದ ಸರ ಬಿಚ್ಚಿಕೊಂಡು ಸ್ಥಳದಿಂದ ಹೊರಟು ಹೋಗಿದ್ದರು. ಕೆಲ ನಿಮಿಷಗಳ ನಂತರ ಚಿನ್ನದ ಸರ ಕಂಡಿರಲಿಲ್ಲ. ತಬ್ಬಿಕೊಂಡವರ ಮೇಲೆಯೇ ಅನುಮಾನ ವ್ಯಕ್ತಪಡಿಸಿ ವಿಶ್ವಾಸ್ ದೂರು ನೀಡಿದ್ದರು’ ಎಂದು ತಿಳಿಸಿವೆ.</p>.<p>‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಹಾಗೂ ಇತರೆ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು. ಇದೇ ಆರೋಪಿ ಎರಡು ಕಡೆ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸ್ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>