‘ಸ್ಥಳದಲ್ಲಿದ್ದ ಆರೋಪಿ ಡ್ರಾಪ್ ಕೇಳುವ ನೆಪದಲ್ಲಿ ವಿಶ್ವಾಸ್ ಅವರನ್ನು ಮಾತನಾಡಿಸಿದ್ದರು. ನಂತರ ಒಂದು ನಿಮಿಷ ಗಟ್ಟಿಯಾಗಿ ತಬ್ಬಿಕೊಂಡಿದ್ದರು. ಅದೇ ವೇಳೆಯೇ ಕೊರಳಲ್ಲಿದ್ದ ₹1 ಲಕ್ಷ ಮೌಲ್ಯದ ಚಿನ್ನದ ಸರ ಬಿಚ್ಚಿಕೊಂಡು ಸ್ಥಳದಿಂದ ಹೊರಟು ಹೋಗಿದ್ದರು. ಕೆಲ ನಿಮಿಷಗಳ ನಂತರ ಚಿನ್ನದ ಸರ ಕಂಡಿರಲಿಲ್ಲ. ತಬ್ಬಿಕೊಂಡವರ ಮೇಲೆಯೇ ಅನುಮಾನ ವ್ಯಕ್ತಪಡಿಸಿ ವಿಶ್ವಾಸ್ ದೂರು ನೀಡಿದ್ದರು’ ಎಂದು ತಿಳಿಸಿವೆ.