‘ವಿಜಯನಗರ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿದ್ದ ಆರೋಪಿಗಳು, ಚಿನ್ನದ ಸರ ಕದ್ದುಕೊಂಡು ಪರಾರಿಯಾಗಿದ್ದರು. ಅದೇ ಆರೋಪಿಗಳು ಬೈಕ್ನಲ್ಲಿ ಚಾಮರಾಜಪೇಟೆಗೆ ಬಂದು ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಲು ಯತ್ನಿಸಿದ್ದರು. ಮಹಿಳೆ ರಕ್ಷಣೆಗಾಗಿ ಕೂಗುತ್ತಿದ್ದಂತೆ ಸಹಾಯಕ್ಕೆ ಬಂದ ಸಾರ್ವಜನಿಕರು, ಆರೋಪಿಗಳನ್ನು ಬೆನ್ನಟ್ಟಿ ಹಿಡಿದಿದ್ದರು. ಇಮ್ರಾನ್ ಖಾನ್ ಮಾತ್ರ ಸಿಕ್ಕಿಬಿದ್ದಿದ್ದ. ನಬೀರ್ ಪಾಷಾ ತಪ್ಪಿಸಿಕೊಂಡಿದ್ದ’ ಎಂದೂ ತಿಳಿಸಿದರು.