<p><strong>ಬೆಂಗಳೂರು:</strong> ‘ಕೊರಿಯರ್’ ನೀಡುವ ನೆಪದಲ್ಲಿ ಮನೆಗಳಿಗೆ ಹೋಗಿ ಮಹಿಳೆಯರ ಚಿನ್ನದ ಸರಗಳನ್ನು ಕಿತ್ತೊಯ್ಯುತ್ತಿದ್ದ ಆರೋಪಿ ಫರ್ವೀದ್ (26) ಎಂಬಾತನನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ನೆಲಮಂಗಲದ ಫರ್ವೀದ್, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಆತನಿಂದ 2 ಚಿನ್ನದ ಸರ, 2 ಕಾರು ಹಾಗೂ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯದ ₹ 8.50 ಲಕ್ಷ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಜೀವನ ನಿರ್ವಹ<br />ಣೆಗೆ ಸಂಬಳ ಸಾಲುತ್ತಿರಲಿಲ್ಲ. ಹೀಗಾಗಿ, ಸುಲಿಗೆ ಮಾಡಲಾರಂಭಿಸಿದ್ದ. ನಂತರ ವಾಹನ ಹಾಗೂ ಸರ ಕಳವು ಶುರು ಮಾಡಿದ್ದ. ಪ್ರಕರಣವೊಂದರಲ್ಲಿ ಜೈಲಿಗೂ ಹೋಗಿ ಬಂದಿದ್ದ’ ಎಂದರು.</p>.<p class="Subhead"><strong>ಮನೆ ಬಾಗಿಲು ಬಡಿದು ಕೃತ್ಯ: </strong>‘ಒಂಟಿ ಮಹಿಳೆಯರು ಇರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದ ಆರೋಪಿ, ಕೊರಿಯರ್ ನೀಡುವ ನೆಪದಲ್ಲಿ ಮನೆಗಳಿಗೆ ಹೋಗಿ, ಬಾಗಿಲು ಬಡಿಯುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಮಹಿಳೆಯರು ಬಾಗಿಲು ತೆರೆಯುತ್ತಿದ್ದಂತೆ, ಕೊರಿಯರ್ ಬಂದಿರುವುದಾಗಿ ಹೇಳಿ ಮೊಬೈಲ್ ಸಂದೇಶ ತೋರಿಸುತ್ತಿದ್ದ. ಸಂದೇಶ ನೋಡುತ್ತಿದ್ದಾಗಲೇ ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೊರಿಯರ್’ ನೀಡುವ ನೆಪದಲ್ಲಿ ಮನೆಗಳಿಗೆ ಹೋಗಿ ಮಹಿಳೆಯರ ಚಿನ್ನದ ಸರಗಳನ್ನು ಕಿತ್ತೊಯ್ಯುತ್ತಿದ್ದ ಆರೋಪಿ ಫರ್ವೀದ್ (26) ಎಂಬಾತನನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ನೆಲಮಂಗಲದ ಫರ್ವೀದ್, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಆತನಿಂದ 2 ಚಿನ್ನದ ಸರ, 2 ಕಾರು ಹಾಗೂ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯದ ₹ 8.50 ಲಕ್ಷ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಜೀವನ ನಿರ್ವಹ<br />ಣೆಗೆ ಸಂಬಳ ಸಾಲುತ್ತಿರಲಿಲ್ಲ. ಹೀಗಾಗಿ, ಸುಲಿಗೆ ಮಾಡಲಾರಂಭಿಸಿದ್ದ. ನಂತರ ವಾಹನ ಹಾಗೂ ಸರ ಕಳವು ಶುರು ಮಾಡಿದ್ದ. ಪ್ರಕರಣವೊಂದರಲ್ಲಿ ಜೈಲಿಗೂ ಹೋಗಿ ಬಂದಿದ್ದ’ ಎಂದರು.</p>.<p class="Subhead"><strong>ಮನೆ ಬಾಗಿಲು ಬಡಿದು ಕೃತ್ಯ: </strong>‘ಒಂಟಿ ಮಹಿಳೆಯರು ಇರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದ ಆರೋಪಿ, ಕೊರಿಯರ್ ನೀಡುವ ನೆಪದಲ್ಲಿ ಮನೆಗಳಿಗೆ ಹೋಗಿ, ಬಾಗಿಲು ಬಡಿಯುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಮಹಿಳೆಯರು ಬಾಗಿಲು ತೆರೆಯುತ್ತಿದ್ದಂತೆ, ಕೊರಿಯರ್ ಬಂದಿರುವುದಾಗಿ ಹೇಳಿ ಮೊಬೈಲ್ ಸಂದೇಶ ತೋರಿಸುತ್ತಿದ್ದ. ಸಂದೇಶ ನೋಡುತ್ತಿದ್ದಾಗಲೇ ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>