ಇದೇ ಸಂದರ್ಭದಲ್ಲಿ ಜಯಪ್ರಕಾಶ್ ನಾರಾಯಣ ಅವರ 118ನೇ ಜನ್ಮದಿನವನ್ನು ಆಚರಿಸಲಾಯಿತು. ‘ಭಾರತದ ಪ್ರಜಾಪ್ರಭುತ್ವ ಮತ್ತು ಉತ್ತರದಾಯಿತ್ವ’ ವಿಷಯದ ಕುರಿತು ಮಾತನಾಡಿದ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್, ‘ಈ ಹಿಂದೆ ಜಾರಿಯಲ್ಲಿದ್ದ ತುರ್ತು ಪರಿಸ್ಥಿತಿ ನಿರ್ದಿಷ್ಟ ಅವಧಿಗೆ ಸೀಮಿತವಾಗಿತ್ತು. ಆದರೆ, ಈಗಿನದ್ದು ಅನಿರ್ದಿಷ್ಟಾವಧಿ ತುರ್ತು ಪರಿಸ್ಥಿತಿ. ಇದೊಂದು ಪ್ರಜಾಪ್ರಭುತ್ವದ ಕರಾಳ ಅಧ್ಯಾಯ’ ಎಂದರು.