ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಗಾಂಜಾ ಬೆಳೆ: ಕೋರಮಂಗಲ ಪೊಲೀಸರಿಂದ ಐವರ ಬಂಧನ‍

* ₹ 40 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ * ಕೋರಮಂಗಲ ಪೊಲೀಸರ ಕಾರ್ಯಾಚರಣೆ
Last Updated 28 ಮಾರ್ಚ್ 2022, 1:37 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಬೆಳೆದ ಗಾಂಜಾವನ್ನು ನಗರಕ್ಕೆ ತಂದು ಮಾರುತ್ತಿದ್ದ ಆರೋಪದಡಿ ಐವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

‘ಶಿವರಾಜ್, ರಮೇಶ್, ಮಂಜುನಾಥ್, ಮೂರ್ತಿ ಹಾಗೂ ಅಭಿಲಾಷ್‌ ಬಂಧಿತರು. ಇವರಿಂದ ₹ 40 ಲಕ್ಷ ಮೌಲ್ಯದ 102 ಕೆ.ಜಿ 200 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ತಿಳಿಸಿದರು.

‘ನಗರದಲ್ಲಿ ವ್ಯವಸ್ಥಿತ ತಂಡ ಕಟ್ಟಿಕೊಂಡು ಆರೋಪಿಗಳು ಗಾಂಜಾ ಮಾರುತ್ತಿದ್ದರು. ಕೋರಮಂಗಲ 1ನೇ ಹಂತದ ಬಳ್ಳಾರಿ ಕಾಲೊನಿ ಬಳಿ ಮಾರ್ಚ್ 16ರಂದು ಆರೋಪಿಯೊಬ್ಬ ಗಾಂಜಾ ಮಾರಲು ಬಂದಿದ್ದ. ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಯಿತು. ಆತ ನೀಡಿದ್ದ ಮಾಹಿತಿ ಆಧರಿಸಿ ಉಳಿದ ಆರೋಪಿಗಳನ್ನು ಸೆರೆ ಹಿಡಿಯಲಾಯಿತು’ ಎಂದೂ ತಿಳಿಸಿದರು.

ಪುಷ್ಪಪುರ ಗ್ರಾಮಸ್ಥರಿಂದ ಖರೀದಿ: ‘ಚಾಮರಾಜನಗರ ಜಿಲ್ಲೆಯ ಹನ್ನೂರು ತಾಲ್ಲೂಕಿನ ಪುಷ್ಪಪುರ ಗ್ರಾಮದಲ್ಲಿ ಕೆಲವರು ಗಾಂಜಾ ಬೆಳೆಯುತ್ತಿದ್ದಾರೆ. ಅವರ ಬಳಿಯೇ ಆರೋಪಿಗಳು ಗಾಂಜಾ ಖರೀದಿಸುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ವಿವರಿಸಿದರು.

‘ಗಾಂಜಾವನ್ನು ಸಣ್ಣ ಪೊಟ್ಟಣಗಳಲ್ಲಿ ತುಂಬಿ ಮಾರಲಾಗುತ್ತಿತ್ತು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು, ಕೆಲ ಕಾರ್ಮಿಕರು ಆರೋಪಿಗಳ ಬಳಿ ಗಾಂಜಾ ಖರೀದಿಸುತ್ತಿದ್ದರು. ಎಚ್‌.ಎಸ್.ಆರ್ ಬಡಾವಣೆ, ಕೆ.ಆರ್.ಪುರ, ಬೇಗೂರು, ಕೋಣನಕುಂಟೆ ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲೂ ಆರೋಪಿಗಳು ಗಾಂಜಾ ಮಾರುತ್ತಿದ್ದರು’ ಎಂದೂ ಶ್ರೀನಾಥ್ ಜೋಷಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT