‘ಗಾಂಜಾವನ್ನು ಸಣ್ಣ ಪೊಟ್ಟಣಗಳಲ್ಲಿ ತುಂಬಿ ಮಾರಲಾಗುತ್ತಿತ್ತು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು, ಕೆಲ ಕಾರ್ಮಿಕರು ಆರೋಪಿಗಳ ಬಳಿ ಗಾಂಜಾ ಖರೀದಿಸುತ್ತಿದ್ದರು. ಎಚ್.ಎಸ್.ಆರ್ ಬಡಾವಣೆ, ಕೆ.ಆರ್.ಪುರ, ಬೇಗೂರು, ಕೋಣನಕುಂಟೆ ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲೂ ಆರೋಪಿಗಳು ಗಾಂಜಾ ಮಾರುತ್ತಿದ್ದರು’ ಎಂದೂ ಶ್ರೀನಾಥ್ ಜೋಷಿ ಹೇಳಿದರು.