<p><strong>ಬೆಂಗಳೂರು:</strong> ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅರ್ಪಿತ್ (25) ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮೃತ ತಂದೆ ಸುರೇಂದ್ರಕುಮಾರ್ ಅಲಿಯಾಸ್ ಬಾಬು (51) ಅವರ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಏಪ್ರಿಲ್ 1ರಂದು ಅರ್ಪಿತ್ ಮೈ ಮೇಲೆ ಥಿನ್ನರ್ ಎರಚಿ ಬೆಂಕಿ ಹಚ್ಚಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಏಪ್ರಿಲ್ 7ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅರ್ಪಿತ್ ತೀರಿಕೊಂಡಿದ್ದರು.</p>.<p>‘ವಿಚಾರಣೆ ನಡೆಸಲಾಗುತ್ತಿದೆ. ಕೃತ್ಯದ ಬಗ್ಗೆ ಸುರೇಂದ್ರಕುಮಾರ್ಪಶ್ಚಾತ್ತಾಪ ಪಡುತ್ತಿದ್ದಾರೆ. ಮಗನ ನೆನೆದು ಕಣ್ಣೀರಿಡುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p class="Subhead"><strong>ಮಾತು ಕೇಳದ ಮಗ: </strong>‘ಮಗನನ್ನು ಪ್ರೀತಿಸುತ್ತಿದ್ದೆ. ತಪ್ಪು ಮಾಡಿದಾಗ ಬುದ್ಧಿ ಹೇಳುತ್ತಿದ್ದೆ. ಕೊಲೆ ಉದ್ದೇಶ ನನಗೆ ಇರಲಿಲ್ಲ. ಬುದ್ಧಿ ಕಲಿಸಲು ಹೋಗಿ ಮಗನನ್ನು ಕಳೆದುಕೊಂಡೆ’ ಎಂಬುದಾಗಿ ಸುರೇಂದ್ರಕುಮಾರ್ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅರ್ಪಿತ್ (25) ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮೃತ ತಂದೆ ಸುರೇಂದ್ರಕುಮಾರ್ ಅಲಿಯಾಸ್ ಬಾಬು (51) ಅವರ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಏಪ್ರಿಲ್ 1ರಂದು ಅರ್ಪಿತ್ ಮೈ ಮೇಲೆ ಥಿನ್ನರ್ ಎರಚಿ ಬೆಂಕಿ ಹಚ್ಚಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಏಪ್ರಿಲ್ 7ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅರ್ಪಿತ್ ತೀರಿಕೊಂಡಿದ್ದರು.</p>.<p>‘ವಿಚಾರಣೆ ನಡೆಸಲಾಗುತ್ತಿದೆ. ಕೃತ್ಯದ ಬಗ್ಗೆ ಸುರೇಂದ್ರಕುಮಾರ್ಪಶ್ಚಾತ್ತಾಪ ಪಡುತ್ತಿದ್ದಾರೆ. ಮಗನ ನೆನೆದು ಕಣ್ಣೀರಿಡುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p class="Subhead"><strong>ಮಾತು ಕೇಳದ ಮಗ: </strong>‘ಮಗನನ್ನು ಪ್ರೀತಿಸುತ್ತಿದ್ದೆ. ತಪ್ಪು ಮಾಡಿದಾಗ ಬುದ್ಧಿ ಹೇಳುತ್ತಿದ್ದೆ. ಕೊಲೆ ಉದ್ದೇಶ ನನಗೆ ಇರಲಿಲ್ಲ. ಬುದ್ಧಿ ಕಲಿಸಲು ಹೋಗಿ ಮಗನನ್ನು ಕಳೆದುಕೊಂಡೆ’ ಎಂಬುದಾಗಿ ಸುರೇಂದ್ರಕುಮಾರ್ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>