‘ಬಿಬಿಎಂಪಿ ಆಟದ ಮೈದಾನ ಬಳಕೆ ಬಗ್ಗೆ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಈ ಜಾಗ ಕಂದಾಯ ಇಲಾಖೆಗೆ ಸೇರಿದ್ದೆಂದು ಬಿಬಿಎಂಪಿ ಜಂಟಿ ಆಯುಕ್ತರು ಆಗಸ್ಟ್ 6ರಂದು ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಭಾಸ್ಕರನ್, ‘ವಕ್ಫ್ ಬೋರ್ಡ್ನವರೇ ಗೋಡೆ ನೆಲಸಮ ಮಾಡಬೇಕು. ಇಲ್ಲದಿದ್ದರೆ, ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಕೆಡವಿದ ದಿನ. ಅಂದೇ ಈ ಗೋಡೆ ನೆಲಸಮ ಮಾಡುತ್ತೇವೆ’ ಎಂದಿದ್ದರು.