ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈದ್ಗಾ ಮೈದಾನ ಆಟದ ಮೈದಾನವಾಗಿಯೇ ಉಳಿಸುವಂತೆ ಆಗ್ರಹಿಸಿ 12ಕ್ಕೆ ಚಾಮರಾಜಪೇಟೆ ಬಂದ್‌

ಈದ್ಗಾ: ಆಟದ ಮೈದಾನವಾಗಿಯೇ ಉಳಿಯಲಿ– ನಾಗರಿಕರ ಒಕ್ಕೂಟ ವೇದಿಕೆ
Last Updated 3 ಜುಲೈ 2022, 20:25 IST
ಅಕ್ಷರ ಗಾತ್ರ

ಬೆಂಗಳೂರು: ‘ಚಾಮರಾಜಪೇಟೆ ಈದ್ಗಾ ಮೈದಾನವನ್ನು ಆಟದ ಮೈದಾನ ವನ್ನಾಗಿಯೇ ಉಳಿಸಿಕೊಳ್ಳಬೇಕು. ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಬೇಕು’ ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಜುಲೈ 12ರಂದು ಬಂದ್‌ಗೆ ಕರೆ ನೀಡಿದೆ.

ಚಾಮರಾಜಪೇಟೆಯ ಜಂಗಮ ಸಮುದಾಯ ಭವನದಲ್ಲಿ ಸ್ಥಳೀಯ ಸುಮಾರು 30 ಸಂಘ–ಸಂಸ್ಥೆಗಳ ಸದಸ್ಯರು ಹಾಗೂ ನಾಗರಿಕರು ಚಾಮ ರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಯಡಿ ಭಾನುವಾರ ಸಭೆ ನಡೆಸಿ ಬಂದ್‌ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ.

‘ಈದ್ಗಾ ಮೈದಾನಕ್ಕೆ ಸಂಬಂಧಿ ಸಿದಂತೆ ವೇದಿಕೆ ಒಂದಷ್ಟು ಬೇಡಿಕೆ ಗಳನ್ನು ಮುಂದಿಟ್ಟಿದೆ. ಅವುಗಳನ್ನು ಮನವಿ ರೂಪದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಲ್ಲಿಸಲಿದೆ. ಬೇಡಿಕೆ ಈಡೇರಿಸದಿದ್ದರೆ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪ್ರದೇಶದಲ್ಲಿ ಶಾಂತಿಯುತವಾಗಿ ಬಂದ್‌ ನಡೆಸಲಾಗುವುದು’ ಎಂದು ವೇದಿಕೆ ಸದಸ್ಯ ಶಶಾಂಕ್‌ ತಿಳಿಸಿದರು.

‘ಬಿಬಿಎಂಪಿ ಮುಖ್ಯ ಆಯುಕ್ತರು ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ಎರಡೆರಡು ಹೇಳಿಕೆಗಳನ್ನು ನೀಡಿದ್ದಾರೆ. ಅವುಗಳನ್ನು ಹಿಂಪಡೆಯಬೇಕು, ಕ್ಷಮೆಯಾಚಿಸಬೇಕು. ಆಟದ ಮೈದಾನವನ್ನಾಗಿಯೇ ಉಳಿಸಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು.

‘ಶಾಸಕ ಜಮೀರ್‌ ಅಹಮದ್‌ 2006ರಲ್ಲಿ ಒಂದು ಒಪ್ಪಂದ ಮಾಡಿದ್ದರು. ಇಲ್ಲಿ ಬಿರುಕುಬಿಟ್ಟಿರುವ ಗೋಡೆಯನ್ನು ದುರಸ್ತಿ ಮಾಡಲು ಅವಕಾಶ ಮಾಡಿಕೊಡಿ. ನಂತರ ಸಾರ್ವಜನಿಕರು ಗಣೇಶ, ದಸರಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಳ್ಳಿ. ವರ್ಷಕ್ಕೆ ಎರಡು ಬಾರಿ ನಮಗೆ ಅವಕಾಶ ಮಾಡಿಕೊಡಿ ಎಂದಿದ್ದರು. ದುರಸ್ತಿ ಮುಗಿದ ಮೇಲೆ ಈ ಮಾತನ್ನು ನಡೆಸಿಕೊಂಡಿಲ್ಲ. ಅವರು ಎಲ್ಲರಿಗೂ ಶಾಸಕರು, ಒಂದುಸಮುದಾಯಕ್ಕಲ್ಲ. ಆದ್ದರಿಂದ ಅವರನ್ನೂ ಈ ಬಗ್ಗೆ ಪ್ರಶ್ನಿಸಲು ನಿರ್ಣಯ ಕೈಗೊಂಡಿದ್ದೇವೆ’ ಎಂದರು.

‘ಜೈ ಚಾಮರಾಜೇಂದ್ರ ಒಡೆಯರ್‌ ಆಟದ ಮೈದಾನ ಎಂದು ನಾಮಕರಣ ಮಾಡಬೇಕು‌ ಎಂದೂ ಒತ್ತಾಯ ಮಾಡಲಿದ್ದೇವೆ’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT