‘ಈದ್ಗಾ ಮೈದಾನಕ್ಕೆ ಜಯಚಾಮರಾಜೇಂದ್ರ ಒಡೆಯರ್ ಅವರ ಹೆಸರಿಡಬೇಕು. ಮೈದಾನ ಬಿಬಿಎಂಪಿ ಸ್ವತ್ತಾಗಿ ಉಳಿಯಬೇಕು. ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಅವಕಾಶ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಾದ್ಯಂತ ಹೋಟೆಲ್, ಗಾರ್ಮೆಂಟ್ಸ್ ಹಾಗೂ ಶಾಲೆಗಳ ಆಡಳಿತ ಮಂಡಳಿಗಳೂ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಚಟುವಟಿಕೆಗಳನ್ನು ಬಂದ್ ಮಾಡಲಿದ್ದಾರೆ’ ಎಂದು ವೇದಿಕೆ ಅಧ್ಯಕ್ಷ ರಾಮೇಗೌಡ ತಿಳಿಸಿದರು.