<p><strong>ಬೆಂಗಳೂರು:</strong> ಐಎಎಸ್ ಅಧಿಕಾರಿ ಡಿ.ಕೆ. ರವಿ ಜೀವನಾಧಾರಿತ ಚಿತ್ರ ಎಂದು ಆಕ್ಷೇಪಿಸಲಾಗಿರುವ ‘ಚಂಬಲ್’ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>‘ಕೇಂದ್ರ ಸೆನ್ಸಾರ್ ಮಂಡಳಿ ನೀಡಿರುವ ಅನುಮತಿ ಅನುಸಾರ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಚಿತ್ರದ ಸಿ.ಡಿಯನ್ನು ಇದೇ 25ಕ್ಕೆ ಕೋರ್ಟ್ಗೆ ಸಲ್ಲಿಸಿ’ ಎಂದು ಚಿತ್ರ ನಿರ್ಮಾಪಕರಿಗೆ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ನಿರ್ದೇಶಿಸಿದೆ.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎನ್.ಪಿ.ಅಮೃತೇಶ್, ‘ಚಿತ್ರವನ್ನು ಡಿ.ಕೆ.ರವಿ ಮತ್ತು ಅವರ ಕುಟುಂಬದ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಚಿತ್ರಿಸಲಾಗಿದೆ. ಚಿತ್ರದ ಟ್ರೇಲರ್ ನೋಡಿದರೆ ಇದು ಸ್ಪಷ್ಟವಾಗುತ್ತದೆ. ಆದ್ದರಿಂದ ಚಿತ್ರ ಬಿಡುಗಡೆಗೆ ತಡೆ ನೀಡಬೇಕು’ ಎಂದು ಕೋರಿದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಚಿತ್ರಕ್ಕೆ 2018ರ ನವೆಂಬರ್ 30ರಂದು ಸೆನ್ಸಾರ್ ಪ್ರಮಾಣಪತ್ರ ನೀಡಲಾಗಿದೆ. ಈತನಕ ಅರ್ಜಿದಾರರು ಈ ಬಗ್ಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಅಂತೆಯೇ ಅರ್ಜಿದಾರರು ಆರೋಪಿಸಿರುವಂತೆ ಇದರಲ್ಲಿ ಯಾವುದೇ ಆಕ್ಷೇಪಾರ್ಹ ಅಥವಾ ಕಾನೂನ ಬಾಹಿರ ಅಂಶಗಳಿಲ್ಲ’ ಎಂದು ತಿಳಿಸಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಚಿತ್ರ ಬಿಡುಗಡೆಗೆ ಇನ್ನೊಂದು ದಿನವಷ್ಟೇ ಬಾಕಿ ಇದೆ. ಈ ಹಂತದಲ್ಲಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕೆಂಬ ಅರ್ಜಿದಾರರ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೇಳಿತು. ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಲಾಗಿದೆ.</p>.<p>ಆದೇಶ ಪ್ರಕಟವಾದ ನಂತರ ಡಿ.ಕೆ.ರವಿ ಅವರ ತಾಯಿ ಗೌರಮ್ಮ, ಕೋರ್ಟ್ ಕಾರಿಡಾರ್ನಲ್ಲಿ ಕಣ್ಣೀರು ಸುರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಎಎಸ್ ಅಧಿಕಾರಿ ಡಿ.ಕೆ. ರವಿ ಜೀವನಾಧಾರಿತ ಚಿತ್ರ ಎಂದು ಆಕ್ಷೇಪಿಸಲಾಗಿರುವ ‘ಚಂಬಲ್’ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>‘ಕೇಂದ್ರ ಸೆನ್ಸಾರ್ ಮಂಡಳಿ ನೀಡಿರುವ ಅನುಮತಿ ಅನುಸಾರ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಚಿತ್ರದ ಸಿ.ಡಿಯನ್ನು ಇದೇ 25ಕ್ಕೆ ಕೋರ್ಟ್ಗೆ ಸಲ್ಲಿಸಿ’ ಎಂದು ಚಿತ್ರ ನಿರ್ಮಾಪಕರಿಗೆ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ನಿರ್ದೇಶಿಸಿದೆ.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎನ್.ಪಿ.ಅಮೃತೇಶ್, ‘ಚಿತ್ರವನ್ನು ಡಿ.ಕೆ.ರವಿ ಮತ್ತು ಅವರ ಕುಟುಂಬದ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಚಿತ್ರಿಸಲಾಗಿದೆ. ಚಿತ್ರದ ಟ್ರೇಲರ್ ನೋಡಿದರೆ ಇದು ಸ್ಪಷ್ಟವಾಗುತ್ತದೆ. ಆದ್ದರಿಂದ ಚಿತ್ರ ಬಿಡುಗಡೆಗೆ ತಡೆ ನೀಡಬೇಕು’ ಎಂದು ಕೋರಿದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಚಿತ್ರಕ್ಕೆ 2018ರ ನವೆಂಬರ್ 30ರಂದು ಸೆನ್ಸಾರ್ ಪ್ರಮಾಣಪತ್ರ ನೀಡಲಾಗಿದೆ. ಈತನಕ ಅರ್ಜಿದಾರರು ಈ ಬಗ್ಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಅಂತೆಯೇ ಅರ್ಜಿದಾರರು ಆರೋಪಿಸಿರುವಂತೆ ಇದರಲ್ಲಿ ಯಾವುದೇ ಆಕ್ಷೇಪಾರ್ಹ ಅಥವಾ ಕಾನೂನ ಬಾಹಿರ ಅಂಶಗಳಿಲ್ಲ’ ಎಂದು ತಿಳಿಸಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಚಿತ್ರ ಬಿಡುಗಡೆಗೆ ಇನ್ನೊಂದು ದಿನವಷ್ಟೇ ಬಾಕಿ ಇದೆ. ಈ ಹಂತದಲ್ಲಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕೆಂಬ ಅರ್ಜಿದಾರರ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೇಳಿತು. ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಲಾಗಿದೆ.</p>.<p>ಆದೇಶ ಪ್ರಕಟವಾದ ನಂತರ ಡಿ.ಕೆ.ರವಿ ಅವರ ತಾಯಿ ಗೌರಮ್ಮ, ಕೋರ್ಟ್ ಕಾರಿಡಾರ್ನಲ್ಲಿ ಕಣ್ಣೀರು ಸುರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>