ಬೆಂಗಳೂರು:ಛಂದ ಪುಸ್ತಕ ಪ್ರಕಾಶನದ ವತಿಯಿಂದ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.
ಇದುವರೆಗೂ ಒಂದೂ ಕಥಾ ಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ನಡೆಯುತ್ತದೆ. ಉತ್ತಮವೆನಿಸಿದ ಸುಮಾರು 8 ಕತೆಗಳನ್ನು ಡಿಟಿಪಿ ಮಾಡಿಸಿ, ಕೊರಿಯರ್ ಮೂಲಕ ಕಳುಹಿಸಬೇಕು.
ಆಯ್ಕೆಯಾದ ಕತೆಗಾರರಿಗೆ ₹ 30 ಸಾವಿರಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ.ಈ ಪುಸ್ತಕವನ್ನು 2019ರ ಅಕ್ಟೋಬರ್ನಲ್ಲಿ, ಬೆಂಗಳೂರಿನಲ್ಲಿ ನಡೆಯವ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ ಜುಲೈ22.