ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛಂದ ಪುಸ್ತಕದಿಂದ ಹಸ್ತಪ್ರತಿ ಆಹ್ವಾನ

Last Updated 1 ಜುಲೈ 2019, 16:24 IST
ಅಕ್ಷರ ಗಾತ್ರ

ಬೆಂಗಳೂರು:ಛಂದ ಪುಸ್ತಕ ಪ್ರಕಾಶನದ ವತಿಯಿಂದ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಇದುವರೆಗೂ ಒಂದೂ ಕಥಾ ಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ನಡೆಯುತ್ತದೆ. ಉತ್ತಮವೆನಿಸಿದ ಸುಮಾರು 8 ಕತೆಗಳನ್ನು ಡಿಟಿಪಿ ಮಾಡಿಸಿ, ಕೊರಿಯರ್‌ ಮೂಲಕ ಕಳುಹಿಸಬೇಕು.

ಆಯ್ಕೆಯಾದ ಕತೆಗಾರರಿಗೆ ₹ 30 ಸಾವಿರಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ.ಈ ಪುಸ್ತಕವನ್ನು 2019ರ ಅಕ್ಟೋಬರ್‌ನಲ್ಲಿ, ಬೆಂಗಳೂರಿನಲ್ಲಿ ನಡೆಯವ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ ಜುಲೈ22.

ವಿಳಾಸ: ಛಂದಪುಸ್ತಕ, ಸಿ/ಒ ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟರಸ್ತೆ, ಬೆಂಗಳೂರು–560 076 (ಮೊಬೈಲ್‌: 98444 22782)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT