<p>ಚಂದಾಪುರ(ಆನೇಕಲ್): ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಬೆಂಗಳೂರು-ಚಂದಾಪುರ-ಅತ್ತಿಬೆಲೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಬುಧವಾರ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಬಳಿಕ ಮಾತನಾಡಿ, 2027ರ ಮಾರ್ಚ್ ಒಳಗಾಗಿ ರಾಷ್ಟ್ರೀಯ ಹೆದ್ದಾರಿಯ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ವಾಹನ ದಟ್ಟಣೆಯಿಂದ ಮುಕ್ತಿ ದೊರೆಯಲಿದೆ ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಹಲವು ಸಮಸ್ಯೆಗಳಿಗೆ ಕಾಮಗಾರಿ ಪರಿಹಾರ ನೀಡಲಿದೆ. ವೀರಸಂದ್ರದಲ್ಲಿ ಮಳೆ ಬಂದಾಗ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತದೆ. ನೀರು ರಸ್ತೆ ಬಾರದಂತೆ ಕ್ರಮ ವಹಿಸಲು ಕಲ್ವರ್ಟ್ ಕಾಮಗಾರಿ ಕೈಗೊಳ್ಳಲಾಗಿದೆ. 45 ದಿನದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.</p>.<p>ಚಂದಾಪುರ ರೈಲ್ವೆ ಸೇತುವೆ ಬಳಿ ರಸ್ತೆ ವಿಸ್ತರಣೆ ಮಾಡಲಾಗುತ್ತಿದೆ. ಕೆಆರ್ಐಡಿಇ ರಸ್ತೆ ವಿಸ್ತರಣೆ ಕಾಮಗಾರಿ ನಡೆಸುತ್ತಿದ್ದು, ನವೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಮೂಲಕ ವಾಹನ ದಟ್ಟಣೆ ಕಡಿಮೆ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.</p>.<p>ಗುಡ್ಡಹಟ್ಟಿ, ಗೆಸ್ಟ್ಲೈನ್ ಬಳಿ ಕೆಳಸೇತುವೆ ನಿರ್ಮಾಣ ಮಾಡಲಾಗಿದೆ. ರಸ್ತೆ ದಟ್ಟಣೆ ತಪ್ಪಿಸಲು ವಾಹನಗಳಿಗೆ ಅನುಕೂಲವಾಗುವಂತೆ ರಸ್ತೆ ವಿಭಜಕ ನಿರ್ಮಾಣ ಮಾಡಿದ್ದು, ಮೂರು ಪಥಗಳಲ್ಲಿ ವಾಹನಗಳು ಸಾಗಲಿದೆ. ಇದರಿಂದ ವಾಹನ ದಟ್ಟಣೆ ಕಡಿಮೆಯಾಗುತ್ತದೆ. ಈ ಕಾಮಗಾರಿಯು 30-40 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.</p>.<p>ಎಸ್ಟಿಆರ್ಆರ್ ಪೂರ್ವ ಕಾಮಗಾರಿಯು ಆಗಸ್ಟ್ ವೇಳೆಗೆ ಮುಗಿಯಲಿದ್ದು, ಇದರಿಂದ ಚಂದಾಪುರ, ಅತ್ತಿಬೆಲೆ, ಹೊಸೂರು ರಸ್ತೆಯಲ್ಲಿ ಶೇ.70ರಷ್ಟು ಲಾರಿಗಳು, ಕ್ಯಾಂಟರ್ಗಳು ಸೇರಿದಂತೆ ಭಾರಿ ವಾಹನಗಳ ಓಡಾಡುವುದಿಲ್ಲ. ಹಾಗಾಗಿ ರಸ್ತೆ ದಟ್ಟಣೆ ಕಡಿಮೆಯಾಗುತ್ತದೆ. ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಕ್ರಮ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು, ಕೆಆರ್ಐಡಿಇ, ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.</p>.<p>ಲಕ್ಷ್ಮೀಸಾಗರ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಸೇತುವೆ ಕಲ್ಪಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸ್ಟೀಲ್ ರಸ್ತೆ ವಿಭಜಕಗಳ ಬದಲಿಗೆ ಸಿಮೆಂಟ್ ರಸ್ತೆ ವಿಭಜಕ ಅಳವಡಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.</p>.<p>ಚಂದಾಪುರ ಪುರಸಭಾ ಅಧ್ಯಕ್ಷೆ ಶಾರದ ವರದರಾಜು, ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ.ಅಶೋಕ್, ಮುಖಂಡರಾದ ಲಕ್ಷ್ಮೀಕಾಂತ್, ಮುರಳಿ, ಶಶಿ, ನಾಗೇಶ್ ರೆಡ್ಡಿ, ನಾರಾಯಣರೆಡ್ಡಿ, ಚಂದಾಪುರ ಪುರಸಭೆ ಮುಖ್ಯಾಧಿಕಾರಿ ರಮೇಶ್ ರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-15-132671099</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಂದಾಪುರ(ಆನೇಕಲ್): ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಬೆಂಗಳೂರು-ಚಂದಾಪುರ-ಅತ್ತಿಬೆಲೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಬುಧವಾರ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಬಳಿಕ ಮಾತನಾಡಿ, 2027ರ ಮಾರ್ಚ್ ಒಳಗಾಗಿ ರಾಷ್ಟ್ರೀಯ ಹೆದ್ದಾರಿಯ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ವಾಹನ ದಟ್ಟಣೆಯಿಂದ ಮುಕ್ತಿ ದೊರೆಯಲಿದೆ ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಹಲವು ಸಮಸ್ಯೆಗಳಿಗೆ ಕಾಮಗಾರಿ ಪರಿಹಾರ ನೀಡಲಿದೆ. ವೀರಸಂದ್ರದಲ್ಲಿ ಮಳೆ ಬಂದಾಗ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತದೆ. ನೀರು ರಸ್ತೆ ಬಾರದಂತೆ ಕ್ರಮ ವಹಿಸಲು ಕಲ್ವರ್ಟ್ ಕಾಮಗಾರಿ ಕೈಗೊಳ್ಳಲಾಗಿದೆ. 45 ದಿನದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.</p>.<p>ಚಂದಾಪುರ ರೈಲ್ವೆ ಸೇತುವೆ ಬಳಿ ರಸ್ತೆ ವಿಸ್ತರಣೆ ಮಾಡಲಾಗುತ್ತಿದೆ. ಕೆಆರ್ಐಡಿಇ ರಸ್ತೆ ವಿಸ್ತರಣೆ ಕಾಮಗಾರಿ ನಡೆಸುತ್ತಿದ್ದು, ನವೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಮೂಲಕ ವಾಹನ ದಟ್ಟಣೆ ಕಡಿಮೆ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.</p>.<p>ಗುಡ್ಡಹಟ್ಟಿ, ಗೆಸ್ಟ್ಲೈನ್ ಬಳಿ ಕೆಳಸೇತುವೆ ನಿರ್ಮಾಣ ಮಾಡಲಾಗಿದೆ. ರಸ್ತೆ ದಟ್ಟಣೆ ತಪ್ಪಿಸಲು ವಾಹನಗಳಿಗೆ ಅನುಕೂಲವಾಗುವಂತೆ ರಸ್ತೆ ವಿಭಜಕ ನಿರ್ಮಾಣ ಮಾಡಿದ್ದು, ಮೂರು ಪಥಗಳಲ್ಲಿ ವಾಹನಗಳು ಸಾಗಲಿದೆ. ಇದರಿಂದ ವಾಹನ ದಟ್ಟಣೆ ಕಡಿಮೆಯಾಗುತ್ತದೆ. ಈ ಕಾಮಗಾರಿಯು 30-40 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.</p>.<p>ಎಸ್ಟಿಆರ್ಆರ್ ಪೂರ್ವ ಕಾಮಗಾರಿಯು ಆಗಸ್ಟ್ ವೇಳೆಗೆ ಮುಗಿಯಲಿದ್ದು, ಇದರಿಂದ ಚಂದಾಪುರ, ಅತ್ತಿಬೆಲೆ, ಹೊಸೂರು ರಸ್ತೆಯಲ್ಲಿ ಶೇ.70ರಷ್ಟು ಲಾರಿಗಳು, ಕ್ಯಾಂಟರ್ಗಳು ಸೇರಿದಂತೆ ಭಾರಿ ವಾಹನಗಳ ಓಡಾಡುವುದಿಲ್ಲ. ಹಾಗಾಗಿ ರಸ್ತೆ ದಟ್ಟಣೆ ಕಡಿಮೆಯಾಗುತ್ತದೆ. ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಕ್ರಮ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು, ಕೆಆರ್ಐಡಿಇ, ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.</p>.<p>ಲಕ್ಷ್ಮೀಸಾಗರ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಸೇತುವೆ ಕಲ್ಪಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸ್ಟೀಲ್ ರಸ್ತೆ ವಿಭಜಕಗಳ ಬದಲಿಗೆ ಸಿಮೆಂಟ್ ರಸ್ತೆ ವಿಭಜಕ ಅಳವಡಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.</p>.<p>ಚಂದಾಪುರ ಪುರಸಭಾ ಅಧ್ಯಕ್ಷೆ ಶಾರದ ವರದರಾಜು, ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ.ಅಶೋಕ್, ಮುಖಂಡರಾದ ಲಕ್ಷ್ಮೀಕಾಂತ್, ಮುರಳಿ, ಶಶಿ, ನಾಗೇಶ್ ರೆಡ್ಡಿ, ನಾರಾಯಣರೆಡ್ಡಿ, ಚಂದಾಪುರ ಪುರಸಭೆ ಮುಖ್ಯಾಧಿಕಾರಿ ರಮೇಶ್ ರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-15-132671099</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>