‘ಚಂದ್ರಾ ಬಡಾವಣೆಯಲ್ಲಿ ವಾಸವಿದ್ದ ಆರೋಪಿ, 2017ರಿಂದ ವಿಜಯನಗರ, ಅನ್ನಪೂರ್ಣೇಶ್ವರಿನಗರ, ಬ್ಯಾಟರಾಯನಪುರ ಹಾಗೂ ಚಂದ್ರಾ ಬಡಾವಣೆಯ ಠಾಣೆಗಳಲ್ಲಿ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದು, ಅಪರಾಧ ಚಟುವಟಿಕೆಗಳಲ್ಲಿ ಮುಂದುವರಿದಿದ್ದ’ ಎಂದು ಪೊಲೀಸರು ತಿಳಿಸಿದರು.