<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರದಿಂದಲೇ ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಹಾಗೂ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮಶತಮಾನೋತ್ಸವವನ್ನು ಆಯೋಜಿಸಬೇಕು’ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಸಲಹೆ ನೀಡಿದರು.</p><p>ಭಾರತ ಯಾತ್ರಾ ಕೇಂದ್ರವು ಚಿತ್ರಕಲಾ ಪರಿಷತ್ತಿನಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಜನ್ಮಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ರಾಜ್ಯ ಸಚಿವ ಸಂಪುಟದ ಬಹುತೇಕ ಸಚಿವರು ಸಮಾಜವಾದದ ಹಿನ್ನೆಲೆಯಿಂದ ಬಂದವರು. ಅವರೆಲ್ಲರಿಗೂ ಚಂದ್ರಶೇಖರ್ ಹಾಗೂ ಹೆಗಡೆ ಅವರೊಂದಿಗೆ ಒಡನಾಟ ಇತ್ತು. ಇದರಿಂದ ರಾಜ್ಯ ಸರ್ಕಾರವೇ ಇಬ್ಬರ ಶತಮಾನೋತ್ಸವ ಆಚರಿಸಬೇಕು. ಕೇಂದ್ರ ಸರ್ಕಾರ ಇದನ್ನು ಮಾಡುವುದಿಲ್ಲ’ ಎಂದು ಹೇಳಿದರು.</p><p>‘ಕರ್ನಾಟಕದಲ್ಲಿ ರಾಮಕೃಷ್ಣಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದರ ಹಿಂದೆ ಚಂದ್ರಶೇಖರ ಅವರ ಪ್ರಭಾವವಿತ್ತು. ಆ ಕಾಲಕ್ಕೆ ಕಾಂಗ್ರೆಸ್ನಲ್ಲಿಯೇ ಪ್ರಬಲ ನಾಯಕರಾಗಿ ಬೆಳೆದು ಆನಂತರ ಜನತಾಪಕ್ಷವನ್ನು ಕಟ್ಟಿ ಬೆಳೆಸಿದರು ಚಂದ್ರಶೇಖರ್. ಅವರು ಮೊರಾರ್ಜಿ ದೇಸಾಯಿ ಅಧಿಕಾರದಿಂದ ಕೆಳಕ್ಕೆ ಇಳಿದಾಗಲೇ ಪ್ರಧಾನಮಂತ್ರಿ ಆಗಬಹುದಿತ್ತು. ಎಂದೂ ಅಧಿಕಾರಕ್ಕೆ ಆಸೆ ಪಡಲಿಲ್ಲ’ ಎಂದು ತಿಳಿಸಿದರು.</p><p>‘ಈಗಂತೂ ಯಾವುದೇ ಒಂದು ವಿಚಾರವನ್ನು ಟೀಕಿಸುವ ಸಂಪ್ರದಾಯ ಬೆಳೆದಿದೆ. ಆರ್ಎಸ್ಎಸ್ ಅನ್ನು ಟೀಕೆ ಮಾಡುವವರೂ ಇನ್ನೊಂದು ಮೂಲಭೂತವಾದವನ್ನೂ ಟೀಕಿಸಬೇಕಲ್ಲವೇ. ಮೋದಿ ವಿರುದ್ದ ಮಾತನಾಡಿದರೆ ಟೀಕೆ ಎದುರಿಸುವೇ ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಬೇಸರಿಸಿದರು.</p><p>ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, ‘ಪ್ರಾಮಾಣಿಕತೆಗೆ ಹೆಸರಾಗಿದ್ದ ಚಂದ್ರಶೇಖರ್ ಅವರು ಆಸ್ತಿ ಪಾಸ್ತಿ ಮಾಡಿಕೊಂಡಿದ್ದರೆ ರಾಜಕಾರಣದಲ್ಲಿ ಎಲ್ಲೋ ಇರುತ್ತಿದ್ದರು. ಅದನ್ನು ಎಂದಿಗೂ ಮಾಡಲಿಲ್ಲ. ಈ ಕಾರಣದಿಂದಲೇ ಅವರು ಜನರ ಕಣ್ಣಲ್ಲಿ ಆದರ್ಶವಾಗಿ ಉಳಿದಿದ್ದಾರೆ’ ಎಂದು ಹೇಳಿದರು.</p><p>ಭಾರತ್ ಯಾತ್ರಾ ಕೇಂದ್ರದ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ‘ಕಳೆದ ವರ್ಷದ ಆಗಸ್ಟ್ನಲ್ಲಿ ರಾಮಕೃಷ್ಣ ಹೆಗಡೆ ಅವರ ಜನ್ಮಶತಮಾನೋತ್ಸವ ಆರಂಭಿಸಿದ್ದೇವೆ. ಬರುವ ಆಗಸ್ಟ್ನಲ್ಲಿ ಹೆಗಡೆ ಹಾಗೂ ಚಂದ್ರಶೇಖರ್ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ’ ಎಂದರು.</p><p>ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿದರು. ವಿಧಾನಪರಿಷತ್ ಮಾಜಿ ಸದಸ್ಯ ಎಂ.ಪಿ.ನಾಡಗೌಡ, ಭಾರತ್ ಯಾತ್ರಾ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕೆ.ವಿ.ನಾಗರಾಜಮೂರ್ತಿ, ಸಂಚಾಲಕ ಕೆ.ಎಸ್.ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರದಿಂದಲೇ ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಹಾಗೂ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮಶತಮಾನೋತ್ಸವವನ್ನು ಆಯೋಜಿಸಬೇಕು’ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಸಲಹೆ ನೀಡಿದರು.</p><p>ಭಾರತ ಯಾತ್ರಾ ಕೇಂದ್ರವು ಚಿತ್ರಕಲಾ ಪರಿಷತ್ತಿನಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಜನ್ಮಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ರಾಜ್ಯ ಸಚಿವ ಸಂಪುಟದ ಬಹುತೇಕ ಸಚಿವರು ಸಮಾಜವಾದದ ಹಿನ್ನೆಲೆಯಿಂದ ಬಂದವರು. ಅವರೆಲ್ಲರಿಗೂ ಚಂದ್ರಶೇಖರ್ ಹಾಗೂ ಹೆಗಡೆ ಅವರೊಂದಿಗೆ ಒಡನಾಟ ಇತ್ತು. ಇದರಿಂದ ರಾಜ್ಯ ಸರ್ಕಾರವೇ ಇಬ್ಬರ ಶತಮಾನೋತ್ಸವ ಆಚರಿಸಬೇಕು. ಕೇಂದ್ರ ಸರ್ಕಾರ ಇದನ್ನು ಮಾಡುವುದಿಲ್ಲ’ ಎಂದು ಹೇಳಿದರು.</p><p>‘ಕರ್ನಾಟಕದಲ್ಲಿ ರಾಮಕೃಷ್ಣಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದರ ಹಿಂದೆ ಚಂದ್ರಶೇಖರ ಅವರ ಪ್ರಭಾವವಿತ್ತು. ಆ ಕಾಲಕ್ಕೆ ಕಾಂಗ್ರೆಸ್ನಲ್ಲಿಯೇ ಪ್ರಬಲ ನಾಯಕರಾಗಿ ಬೆಳೆದು ಆನಂತರ ಜನತಾಪಕ್ಷವನ್ನು ಕಟ್ಟಿ ಬೆಳೆಸಿದರು ಚಂದ್ರಶೇಖರ್. ಅವರು ಮೊರಾರ್ಜಿ ದೇಸಾಯಿ ಅಧಿಕಾರದಿಂದ ಕೆಳಕ್ಕೆ ಇಳಿದಾಗಲೇ ಪ್ರಧಾನಮಂತ್ರಿ ಆಗಬಹುದಿತ್ತು. ಎಂದೂ ಅಧಿಕಾರಕ್ಕೆ ಆಸೆ ಪಡಲಿಲ್ಲ’ ಎಂದು ತಿಳಿಸಿದರು.</p><p>‘ಈಗಂತೂ ಯಾವುದೇ ಒಂದು ವಿಚಾರವನ್ನು ಟೀಕಿಸುವ ಸಂಪ್ರದಾಯ ಬೆಳೆದಿದೆ. ಆರ್ಎಸ್ಎಸ್ ಅನ್ನು ಟೀಕೆ ಮಾಡುವವರೂ ಇನ್ನೊಂದು ಮೂಲಭೂತವಾದವನ್ನೂ ಟೀಕಿಸಬೇಕಲ್ಲವೇ. ಮೋದಿ ವಿರುದ್ದ ಮಾತನಾಡಿದರೆ ಟೀಕೆ ಎದುರಿಸುವೇ ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಬೇಸರಿಸಿದರು.</p><p>ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, ‘ಪ್ರಾಮಾಣಿಕತೆಗೆ ಹೆಸರಾಗಿದ್ದ ಚಂದ್ರಶೇಖರ್ ಅವರು ಆಸ್ತಿ ಪಾಸ್ತಿ ಮಾಡಿಕೊಂಡಿದ್ದರೆ ರಾಜಕಾರಣದಲ್ಲಿ ಎಲ್ಲೋ ಇರುತ್ತಿದ್ದರು. ಅದನ್ನು ಎಂದಿಗೂ ಮಾಡಲಿಲ್ಲ. ಈ ಕಾರಣದಿಂದಲೇ ಅವರು ಜನರ ಕಣ್ಣಲ್ಲಿ ಆದರ್ಶವಾಗಿ ಉಳಿದಿದ್ದಾರೆ’ ಎಂದು ಹೇಳಿದರು.</p><p>ಭಾರತ್ ಯಾತ್ರಾ ಕೇಂದ್ರದ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ‘ಕಳೆದ ವರ್ಷದ ಆಗಸ್ಟ್ನಲ್ಲಿ ರಾಮಕೃಷ್ಣ ಹೆಗಡೆ ಅವರ ಜನ್ಮಶತಮಾನೋತ್ಸವ ಆರಂಭಿಸಿದ್ದೇವೆ. ಬರುವ ಆಗಸ್ಟ್ನಲ್ಲಿ ಹೆಗಡೆ ಹಾಗೂ ಚಂದ್ರಶೇಖರ್ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ’ ಎಂದರು.</p><p>ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿದರು. ವಿಧಾನಪರಿಷತ್ ಮಾಜಿ ಸದಸ್ಯ ಎಂ.ಪಿ.ನಾಡಗೌಡ, ಭಾರತ್ ಯಾತ್ರಾ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕೆ.ವಿ.ನಾಗರಾಜಮೂರ್ತಿ, ಸಂಚಾಲಕ ಕೆ.ಎಸ್.ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>