ಕೃತಿಗಳ ಬಗ್ಗೆ ಮಾತನಾಡಿದ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ, ‘ಕಂಬಾರರ ನಾಟಕ ಸಾಹಿತ್ಯದಲ್ಲಿ ಭಾಷೆಯೇ ಭಿನ್ನ. ಅದರದ್ದೇ ಆದ ಪದಗತಿಯಲ್ಲಿ ವಿಶೇಷವೆನ್ನಿಸುತ್ತದೆ. ಭಾಷೆ ಕಸುವನ್ನು ಇನ್ನೊಂದು ಭಾಷೆಯ ಜೊತೆಗೆ ಸಮೀಕರಿಸುವ ಕೆಲಸ ಮಾಡಲಾಗಿದೆ. ಬದುಕಿನ ಬಗ್ಗೆ ಭರವಸೆ ಮೂಡಿಸುವ, ನಾಳೆಗಳಿವೆ ಎಂದು ತಿಳಿಸುವ ನಾಟಕ ಕೃತಿಗಳಿವು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.