<p><strong>ಬೆಂಗಳೂರು</strong>: ಚಂದ್ರಯಾನ-3ರ ಯಶಸ್ವಿಯಾಗಿದ್ದಕ್ಕೆ ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಬಳಿಕ ದೆಹಲಿಗೆ ತೆರಳಿದರು. </p><p>ಪೀಣ್ಯದಲ್ಲಿರುವ ಇಸ್ರೊ ಕಮಾಂಡಿಂಗ್ ಸೆಂಟರ್ನಲ್ಲಿ ಚಂದ್ರಯಾನ-3ರ ಯಶಸ್ಸಿಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p><strong><a href="https://www.prajavani.net/district/bengaluru-city/chandrayaan-3-successful-isro-scientists-congratulate-scientists-happy-to-see-pragyans-narendra-modi-2455359" rel="nofollow">ಇಸ್ರೊದಲ್ಲಿ ಮೋದಿ ಭಾಷಣ: ಚಂದ್ರಯಾನ–3ಕ್ಕಾಗಿ ದುಡಿದ ಎಲ್ಲರಿಗೂ ಸಲ್ಯೂಟ್</a></strong></p>.<p>ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಅವರು ಪ್ರಧಾನಿಯವರಿಗೆ ಚಂದ್ರಯಾನ-3ರ ಪ್ರತಿಕೃತಿಯನ್ನು ನೀಡಿ ಗೌರವಿಸಿದರು. ಸೋಮನಾಥ್ ಸೇರಿದಂತೆ ಚಂದ್ರಯಾನ-3ರ ನೇತೃತ್ವ ವಹಿಸಿದ್ದ ವಿಜ್ಞಾನಿಗಳನ್ನು ಬೆನ್ನುತಟ್ಟಿ ಪ್ರಧಾನಿ ಅಭಿನಂದಿಸಿದರು.<br><br>ಇಲ್ಲಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. </p><p>ಬ್ರಿಕ್ಸ್ ಶೃಂಗಸಭೆ ಮುಗಿಸಿಕೊಂಡು ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದರು.</p>.<p><a href="https://www.prajavani.net/district/bengaluru-city/pm-modi-arrives-in-bengaluru-to-congratulate-scientists-visits-isro-2455351">ವಿಜ್ಞಾನಿಗಳ ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಇಸ್ರೊಗೆ ಭೇಟಿ</a></p>.<p>ಮೋದಿ ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿತ್ತು. ಬೆಳಿಗ್ಗೆ 4:30 ರಿಂದ ಬೆಳಿಗ್ಗೆ 9:30ರ ವರೆಗೆ ಕೆಲ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು ಎಂದು ಸಂಚಾರ ಪೋಲಿಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಂದ್ರಯಾನ-3ರ ಯಶಸ್ವಿಯಾಗಿದ್ದಕ್ಕೆ ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಬಳಿಕ ದೆಹಲಿಗೆ ತೆರಳಿದರು. </p><p>ಪೀಣ್ಯದಲ್ಲಿರುವ ಇಸ್ರೊ ಕಮಾಂಡಿಂಗ್ ಸೆಂಟರ್ನಲ್ಲಿ ಚಂದ್ರಯಾನ-3ರ ಯಶಸ್ಸಿಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p><strong><a href="https://www.prajavani.net/district/bengaluru-city/chandrayaan-3-successful-isro-scientists-congratulate-scientists-happy-to-see-pragyans-narendra-modi-2455359" rel="nofollow">ಇಸ್ರೊದಲ್ಲಿ ಮೋದಿ ಭಾಷಣ: ಚಂದ್ರಯಾನ–3ಕ್ಕಾಗಿ ದುಡಿದ ಎಲ್ಲರಿಗೂ ಸಲ್ಯೂಟ್</a></strong></p>.<p>ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಅವರು ಪ್ರಧಾನಿಯವರಿಗೆ ಚಂದ್ರಯಾನ-3ರ ಪ್ರತಿಕೃತಿಯನ್ನು ನೀಡಿ ಗೌರವಿಸಿದರು. ಸೋಮನಾಥ್ ಸೇರಿದಂತೆ ಚಂದ್ರಯಾನ-3ರ ನೇತೃತ್ವ ವಹಿಸಿದ್ದ ವಿಜ್ಞಾನಿಗಳನ್ನು ಬೆನ್ನುತಟ್ಟಿ ಪ್ರಧಾನಿ ಅಭಿನಂದಿಸಿದರು.<br><br>ಇಲ್ಲಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. </p><p>ಬ್ರಿಕ್ಸ್ ಶೃಂಗಸಭೆ ಮುಗಿಸಿಕೊಂಡು ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದರು.</p>.<p><a href="https://www.prajavani.net/district/bengaluru-city/pm-modi-arrives-in-bengaluru-to-congratulate-scientists-visits-isro-2455351">ವಿಜ್ಞಾನಿಗಳ ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಇಸ್ರೊಗೆ ಭೇಟಿ</a></p>.<p>ಮೋದಿ ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿತ್ತು. ಬೆಳಿಗ್ಗೆ 4:30 ರಿಂದ ಬೆಳಿಗ್ಗೆ 9:30ರ ವರೆಗೆ ಕೆಲ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು ಎಂದು ಸಂಚಾರ ಪೋಲಿಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>