<p><strong>ಬೆಂಗಳೂರು: </strong>ರೈಲು ಪ್ರಯಾಣಿಕರನ್ನು ಆಕರ್ಷಿಸುವ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದೊಂದಿಗೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲ್ವೆ ನಿಲ್ದಾಣದಲ್ಲಿ ‘ಚನ್ನಪಟ್ಟಣ ಆಟಿಕೆಗಳ ಮಳಿಗೆ’ಯನ್ನು ಶುಕ್ರವಾರ ಆರಂಭಿಸಿತು.</p>.<p>ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ‘ಒಂದು ನಿಲ್ದಾಣ–ಒಂದು ಉತ್ಪನ್ನ’ ಯೋಜನೆಯಡಿ ಈ ಮಳಿಗೆ ತೆರೆಯಲಾಗಿದೆ. ಸ್ಥಳೀಯ ಕುಶಲಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರೋತ್ಸಾಹಿಸುವುದು ಈ ಉಪಕ್ರಮದ ಉದ್ದೇಶ. ಕೆಎಸ್ಆರ್ ರೈಲು ನಿಲ್ದಾಣವುಚನ್ನಪಟ್ಟಣದ ಆಟಿಕೆಗಳನ್ನು ಮಾರಾಟ ಮಾಡುವ ರಾಜ್ಯದ ಮೊದಲ ರೈಲು ನಿಲ್ದಾಣವಾಗಿ ಹೊರಹೊಮ್ಮಿದೆ.</p>.<p>ಜನರ ಪ್ರತಿಕ್ರಿಯೆ ಮೇರೆಗೆ ಮಳಿಗೆಯನ್ನು ಮುಂದುವರೆಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದಕ್ಕಾಗಿ ಚನ್ನಪಟ್ಟಣ ಕರಕುಶಲ ಕಲಾವಿದರ ಸಂಘದ ಕುಶಲಕರ್ಮಿ ವಿ.ಪ್ರಕಾಶ್ ಅವರಿಗೆಪ್ರಾಯೋಗಿಕವಾಗಿ ಚನ್ನಪಟ್ಟಣದ ಆಟಿಕೆಗಳ ಪ್ರಚಾರಕ್ಕಾಗಿ ಈ ಮಳಿಗೆಯನ್ನು ಮಂಜೂರು ಮಾಡಿದೆ.</p>.<p>ಚನ್ನಪಟ್ಟಣದ ಮರದ ಬುಗುರಿ, ದಿಬ್ಬಣ ತಂಡದ ಆಟಿಕೆ ಗೊಂಬೆಗಳು, ದಸರಾ ಗೊಂಬೆಗಳು, ಗೃಹಾಲಂಕಾರದ, ಗೃಹೋಪಯೋಗಿ ವಸ್ತುಗಳು, ಮರದ ಆಭರಣಗಳು ಸೇರಿದಂತೆ ನೂರಾರು ಆಟಿಕೆಗಳನ್ನು ಮಳಿಗೆಯಲ್ಲಿ ಖರೀದಿಸಬಹುದು. ಗುಲಗಂಜಿ ಗಾತ್ರದ ಗೊಂಬೆಗಳಿಂದ ದೊಡ್ಡ ಕೆತ್ತನೆಯ ಗೊಂಬೆಗಳು ಇಲ್ಲಿದ್ದು, ₹50ರಿಂದ ₹10 ಸಾವಿರ ಬೆಲೆಯ ಆಟಿಕೆಗಳೂ ಈ ಮಳಿಗೆಯಲ್ಲಿ ಲಭ್ಯ.</p>.<p>ಮಳಿಗೆ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ ಸಿಂಗ್,‘ಒಂದು ನಿಲ್ದಾಣ–ಒಂದು ಉತ್ಪನ್ನ’ ಯೋಜನೆಯ ಭಾಗವಾಗಿ ಮಳಿಗೆ ಆರಂಭಿಸಿದ್ದೇವೆ.ರೈಲು ನಿಲ್ದಾಣಗಳನ್ನು ಸಾಂಪ್ರದಾಯಿಕ ಕಲೆಗಳ ಪ್ರದರ್ಶನ ಸ್ಥಳಗಳಾಗಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಕ್ರಮದಿಂದ ಕರಕುಶಲ ವಸ್ತುಗಳ ಮಾರಾಟಕ್ಕೂ ಪ್ರೋತ್ಸಾಹ ಸಿಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರೈಲು ಪ್ರಯಾಣಿಕರನ್ನು ಆಕರ್ಷಿಸುವ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದೊಂದಿಗೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲ್ವೆ ನಿಲ್ದಾಣದಲ್ಲಿ ‘ಚನ್ನಪಟ್ಟಣ ಆಟಿಕೆಗಳ ಮಳಿಗೆ’ಯನ್ನು ಶುಕ್ರವಾರ ಆರಂಭಿಸಿತು.</p>.<p>ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ‘ಒಂದು ನಿಲ್ದಾಣ–ಒಂದು ಉತ್ಪನ್ನ’ ಯೋಜನೆಯಡಿ ಈ ಮಳಿಗೆ ತೆರೆಯಲಾಗಿದೆ. ಸ್ಥಳೀಯ ಕುಶಲಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರೋತ್ಸಾಹಿಸುವುದು ಈ ಉಪಕ್ರಮದ ಉದ್ದೇಶ. ಕೆಎಸ್ಆರ್ ರೈಲು ನಿಲ್ದಾಣವುಚನ್ನಪಟ್ಟಣದ ಆಟಿಕೆಗಳನ್ನು ಮಾರಾಟ ಮಾಡುವ ರಾಜ್ಯದ ಮೊದಲ ರೈಲು ನಿಲ್ದಾಣವಾಗಿ ಹೊರಹೊಮ್ಮಿದೆ.</p>.<p>ಜನರ ಪ್ರತಿಕ್ರಿಯೆ ಮೇರೆಗೆ ಮಳಿಗೆಯನ್ನು ಮುಂದುವರೆಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದಕ್ಕಾಗಿ ಚನ್ನಪಟ್ಟಣ ಕರಕುಶಲ ಕಲಾವಿದರ ಸಂಘದ ಕುಶಲಕರ್ಮಿ ವಿ.ಪ್ರಕಾಶ್ ಅವರಿಗೆಪ್ರಾಯೋಗಿಕವಾಗಿ ಚನ್ನಪಟ್ಟಣದ ಆಟಿಕೆಗಳ ಪ್ರಚಾರಕ್ಕಾಗಿ ಈ ಮಳಿಗೆಯನ್ನು ಮಂಜೂರು ಮಾಡಿದೆ.</p>.<p>ಚನ್ನಪಟ್ಟಣದ ಮರದ ಬುಗುರಿ, ದಿಬ್ಬಣ ತಂಡದ ಆಟಿಕೆ ಗೊಂಬೆಗಳು, ದಸರಾ ಗೊಂಬೆಗಳು, ಗೃಹಾಲಂಕಾರದ, ಗೃಹೋಪಯೋಗಿ ವಸ್ತುಗಳು, ಮರದ ಆಭರಣಗಳು ಸೇರಿದಂತೆ ನೂರಾರು ಆಟಿಕೆಗಳನ್ನು ಮಳಿಗೆಯಲ್ಲಿ ಖರೀದಿಸಬಹುದು. ಗುಲಗಂಜಿ ಗಾತ್ರದ ಗೊಂಬೆಗಳಿಂದ ದೊಡ್ಡ ಕೆತ್ತನೆಯ ಗೊಂಬೆಗಳು ಇಲ್ಲಿದ್ದು, ₹50ರಿಂದ ₹10 ಸಾವಿರ ಬೆಲೆಯ ಆಟಿಕೆಗಳೂ ಈ ಮಳಿಗೆಯಲ್ಲಿ ಲಭ್ಯ.</p>.<p>ಮಳಿಗೆ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ ಸಿಂಗ್,‘ಒಂದು ನಿಲ್ದಾಣ–ಒಂದು ಉತ್ಪನ್ನ’ ಯೋಜನೆಯ ಭಾಗವಾಗಿ ಮಳಿಗೆ ಆರಂಭಿಸಿದ್ದೇವೆ.ರೈಲು ನಿಲ್ದಾಣಗಳನ್ನು ಸಾಂಪ್ರದಾಯಿಕ ಕಲೆಗಳ ಪ್ರದರ್ಶನ ಸ್ಥಳಗಳಾಗಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಕ್ರಮದಿಂದ ಕರಕುಶಲ ವಸ್ತುಗಳ ಮಾರಾಟಕ್ಕೂ ಪ್ರೋತ್ಸಾಹ ಸಿಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>