ನಿರ್ಮಾಣ ಹಂತದ ಪಿಲ್ಲರ್ನ ಕಬ್ಬಿಣದ ಚೌಕಟ್ಟು ಜ. 10ರಂದು ಉರುಳಿ ಬಿದ್ದಿತ್ತು. ಬೈಕ್ನಲ್ಲಿ ಹೊರಟಿದ್ದ ತೇಜಸ್ವಿನಿ ಸುಲಾಖೆ (28) ಹಾಗೂ ಅವರ ಎರಡೂವರೆ ವರ್ಷದ ಮಗ ವಿಹಾನ್ ಮೃತಪಟ್ಟಿದ್ದರು. ಪತಿಗೆ ಗಾಯವಾಗಿತ್ತು.
ದುರಂತದ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು, ಬಿಎಂಆರ್ಸಿಎಲ್ ಹಾಗೂ ನಾಗಾರ್ಜುನ್ ಕನ್ಸ್ಟ್ರಕ್ಷನ್ ಕಂಪನಿ (ಎನ್ಸಿಸಿ) 11 ಅಧಿಕಾರಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದಾರೆ.