2016, 2017ರಲ್ಲಿ ಬೆಳಗಾವಿ ಯ ವಿಧಾನಮಂಡಲ ಅಧಿವೇಶನಕ್ಕೆ ಸಂಬಂ ಧಿಸಿದಂತೆ ಕೈಗೊಂಡ ಕಾಮಗಾರಿಗಳು ಮತ್ತು ಖರ್ಚು ವೆಚ್ಚದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪದಡಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ 2018ರ ಡಿ. 27ರಂದು ಮೂರ್ತಿ ಅವರನ್ನು ಅಮಾನತು ಮಾಡಲಾಗಿತ್ತು. ಶಿಸ್ತು ಪ್ರಾಧಿಕಾರ ನೀಡಿದ್ದ ನೋಟಿಸ್ ಪ್ರಶ್ನಿಸಿ ಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ, ಇಲಾಖಾ ವಿಚಾರಣೆ ಸ್ಥಗಿತಗೊಳಿಸಲಾಗಿತ್ತು. ನ. 4ರಂದು ರಿಟ್ ಅರ್ಜಿ ವಜಾಗೊಳಿಸಿರುವ ಕೋರ್ಟ್, 6 ತಿಂಗಳ ಒಳಗೆ ವಿಚಾರಣೆ ಪೂರ್ಣಗೊಳಿಸಲು ಆದೇಶಿಸಿದೆ.