<p><strong>ಬೊಮ್ಮನಹಳ್ಳಿ</strong>: ‘ಸಹಕಾರಿ ಬ್ಯಾಂಕುಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸಿ ಲಾಭದಾಯಕವಾಗಿ ಮುನ್ನಡೆಯುತ್ತಿದೆʼ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಮಾಧವರೆಡ್ಡಿ ತಿಳಿಸಿದರು.</p>.<p>ಭಾನುವಾರ ಕೋರಮಂಗಲದಲ್ಲಿ ನಡೆದ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ʼಚಾರ್ಟರ್ಡ್ ಬ್ಯಾಂಕ್ 2022ನೇ ಸಾಲಿನ ದೇಶದ ಅತ್ಯುತ್ತಮ ಬ್ಯಾಂಕ್ ಎಂಬ ಭಾಜನಕ್ಕೆ ಪಾತ್ರವಾಗಿದೆ. ಜತೆಗೆ ಅನುತ್ಪಾದಕ ಆಸ್ತಿಯ ಪ್ರಮಾಣವನ್ನು ಶೂನ್ಯಕ್ಕಿಳಿಸಿದ ಸಾಧನೆ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗಿದೆʼ ಎಂದು ಶ್ಲಾಘಿಸಿದರು.</p>.<p>ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಎಂ.ಮುನಿರೆಡ್ಡಿ ಮಾತನಾಡಿ, ‘ಕೇವಲ ₹80 ಲಕ್ಷ ಬಂಡವಾಳದೊಂದಿಗೆ ಆರಂಭವಾದ ಬ್ಯಾಂಕ್ ಇಂದು ₹170 ಕೋಟಿ ವಹಿವಾಟು ನಡೆಸುವ ಹಂತಕ್ಕೆ ಬೆಳೆದಿದೆ. ಆರು ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆʼ ಎಂದು ಮಾಹಿತಿ ನೀಡಿದರು.</p>.<p>ಉಪಾಧ್ಯಕ್ಷ ನಾರಾಯಣ ಎಸ್. ಭಟ್, ಸಂಸ್ಥಾಪಕ ಅಧ್ಯಕ್ಷ ಎಂ.ನಾಗರಾಜ್, ಸಂಸ್ಥಾಪಕ ಉಪಾಧ್ಯಕ್ಷ ವಿಜಯರಾಘವ ರೆಡ್ಡಿ, ಬ್ಯಾಂಕಿನ ಸಿಇಒ ಕೆ.ಬಿ. ಶಿವಣ್ಣ, ಆಡಳಿತ ಮಂಡಳಿ ಸದಸ್ಯರಾದ ಮುನಿವೆಂಕಟಪ್ಪ, ವೆಂಕಟೇಶ್ ಅಯ್ಯರ್ ಭಾಗವಹಿಸಿದ್ದರು. ರಜತ ಮಹೋತ್ಸವದ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ</strong>: ‘ಸಹಕಾರಿ ಬ್ಯಾಂಕುಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸಿ ಲಾಭದಾಯಕವಾಗಿ ಮುನ್ನಡೆಯುತ್ತಿದೆʼ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಮಾಧವರೆಡ್ಡಿ ತಿಳಿಸಿದರು.</p>.<p>ಭಾನುವಾರ ಕೋರಮಂಗಲದಲ್ಲಿ ನಡೆದ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ʼಚಾರ್ಟರ್ಡ್ ಬ್ಯಾಂಕ್ 2022ನೇ ಸಾಲಿನ ದೇಶದ ಅತ್ಯುತ್ತಮ ಬ್ಯಾಂಕ್ ಎಂಬ ಭಾಜನಕ್ಕೆ ಪಾತ್ರವಾಗಿದೆ. ಜತೆಗೆ ಅನುತ್ಪಾದಕ ಆಸ್ತಿಯ ಪ್ರಮಾಣವನ್ನು ಶೂನ್ಯಕ್ಕಿಳಿಸಿದ ಸಾಧನೆ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗಿದೆʼ ಎಂದು ಶ್ಲಾಘಿಸಿದರು.</p>.<p>ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಎಂ.ಮುನಿರೆಡ್ಡಿ ಮಾತನಾಡಿ, ‘ಕೇವಲ ₹80 ಲಕ್ಷ ಬಂಡವಾಳದೊಂದಿಗೆ ಆರಂಭವಾದ ಬ್ಯಾಂಕ್ ಇಂದು ₹170 ಕೋಟಿ ವಹಿವಾಟು ನಡೆಸುವ ಹಂತಕ್ಕೆ ಬೆಳೆದಿದೆ. ಆರು ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆʼ ಎಂದು ಮಾಹಿತಿ ನೀಡಿದರು.</p>.<p>ಉಪಾಧ್ಯಕ್ಷ ನಾರಾಯಣ ಎಸ್. ಭಟ್, ಸಂಸ್ಥಾಪಕ ಅಧ್ಯಕ್ಷ ಎಂ.ನಾಗರಾಜ್, ಸಂಸ್ಥಾಪಕ ಉಪಾಧ್ಯಕ್ಷ ವಿಜಯರಾಘವ ರೆಡ್ಡಿ, ಬ್ಯಾಂಕಿನ ಸಿಇಒ ಕೆ.ಬಿ. ಶಿವಣ್ಣ, ಆಡಳಿತ ಮಂಡಳಿ ಸದಸ್ಯರಾದ ಮುನಿವೆಂಕಟಪ್ಪ, ವೆಂಕಟೇಶ್ ಅಯ್ಯರ್ ಭಾಗವಹಿಸಿದ್ದರು. ರಜತ ಮಹೋತ್ಸವದ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>