‘ಅರ್ಥಶಾಸ್ತ್ರ ಉಪನ್ಯಾಸಕರಾಗಿರುವ ಶ್ರೀನಿವಾಸ್, ತಮಗೆ ಹಣದ ವ್ಯವಹಾರ ಚೆನ್ನಾಗಿ ಗೊತ್ತಿರುವುದಾಗಿ ತಿಳಿಸಿದ್ದರು. ಹಣವನ್ನು ಹೂಡಿಕೆ ಮಾಡಿದರೆ ಶೇ 2ರಷ್ಟು ಲಾಭಾಂಶ ಕೊಡಿಸುವುದಾಗಿ ಹೇಳಿದ್ದರು. ಅವರ ಮಾತು ನಂಬಿ ಹಣ ಹೂಡಿಕೆ ಮಾಡಿದ್ದೆ. ನನ್ನ ಸ್ನೇಹಿತರನ್ನೂ ಪರಿಚಯ ಮಾಡಿಕೊಂಡು ಆತ ಹಣ ಹೂಡಿಕೆ ಮಾಡಿಸಿಕೊಂಡಿದ್ದರು. ಅದಕ್ಕೆ ಪತ್ನಿಯೂ ಸಹಕಾರ ನೀಡಿದ್ದರು’ ಎಂದು ದೂರಿನಲ್ಲಿ ರಮೇಶ್ ಹೇಳಿದ್ದಾರೆ.