<p><strong>ಬೆಂಗಳೂರು</strong>: ಸಾರ್ವಜನಿಕರಿಗೆ ವಂಚಿಸಿದ ಆರೋಪದ ಮೇಲೆ ಬಂಧಿತರಾಗಿರುವ ರೇಖಾ ದಂಪತಿ ಎರಡು ವರ್ಷದಲ್ಲಿ ₹24 ಕೋಟಿ ಮೊತ್ತದ ವಹಿವಾಟು ನಡೆಸಿರುವುದು ಸಿಸಿಬಿ ಆರ್ಥಿಕ ಅಪರಾಧ ದಳದ ತನಿಖೆ ವೇಳೆ ಗೊತ್ತಾಗಿದೆ.</p>.<p>ಎಚ್ಡಿಎಫ್ಸಿ ಮತ್ತು ಬ್ಯಾಂಕ್ ಆಫ್ ಬರೋಡಾದಲ್ಲಿ ಎರಡು ಖಾತೆಗಳನ್ನು ಹೊಂದಿದ್ದು, ಇದರಲ್ಲಿ 2002ರಿಂದ 2024ರ ಅವಧಿಯಲ್ಲಿ ₹24 ಕೋಟಿ ವ್ಯವಹಾರ ನಡೆಸಿದ್ದಾರೆ. ಅಲ್ಲದೇ ಕರ್ನಾಟಕ ಬ್ಯಾಂಕ್ ಹಾಗೂ ಎಸ್ಬಿಐನಲ್ಲೂ ಖಾತೆ ಹೊಂದಿದ್ದು, ಹಣದ ವಹಿವಾಟುಗಳ ಕುರಿತು ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದರು.</p>.<p>ರಿಯಲ್ ಎಸ್ಟೇಟ್ ಉದ್ಯಮಿ ನಿಸಾರ್ ಅಹ್ಮದ್ ಅವರಿಗೆ ₹6 ಕೋಟಿ ವಂಚಿಸಿದ ಆರೋಪದಡಿ ರೇಖಾ (38), ಆಕೆಯ ಪತಿ ಮಂಜುನಾಥಾಚಾರಿ (40) ಮತ್ತು ಸ್ನೇಹಿತ ಚೇತನ್ (35) ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು.</p>.<p>‘ಮೂವರೂ ಸೇರಿ ಉದ್ಯಮಿಗೆ ವಂಚಿಸಿರುವುದಾಗಿ ವಿಚಾರಣೆ ವೇಳೆ ರೇಖಾ ತಿಳಿಸಿದ್ದಾಳೆ. ಸಾಲ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಮೋಸ ಮಾಡಿರುವುದಲ್ಲದೇ, ‘ಶೇರ್ಚಾಟ್’ ಆ್ಯಪ್ನಲ್ಲಿ ವ್ಯಕ್ತಿಯೊಬ್ಬರಿಗೆ ವಿಡಿಯೊ ಕರೆ ಮಾಡಿ, ₹31 ಲಕ್ಷ ಪಡೆದು ವಂಚಿಸಿದ್ದಾಳೆ. ಅಲ್ಲದೇ ಈಕೆ ವಿರುದ್ಧ ಹಲವು ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವುದು ತನಿಖೆ ವೇಳೆ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು. </p>.<p>ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾರ್ವಜನಿಕರಿಗೆ ವಂಚಿಸಿದ ಆರೋಪದ ಮೇಲೆ ಬಂಧಿತರಾಗಿರುವ ರೇಖಾ ದಂಪತಿ ಎರಡು ವರ್ಷದಲ್ಲಿ ₹24 ಕೋಟಿ ಮೊತ್ತದ ವಹಿವಾಟು ನಡೆಸಿರುವುದು ಸಿಸಿಬಿ ಆರ್ಥಿಕ ಅಪರಾಧ ದಳದ ತನಿಖೆ ವೇಳೆ ಗೊತ್ತಾಗಿದೆ.</p>.<p>ಎಚ್ಡಿಎಫ್ಸಿ ಮತ್ತು ಬ್ಯಾಂಕ್ ಆಫ್ ಬರೋಡಾದಲ್ಲಿ ಎರಡು ಖಾತೆಗಳನ್ನು ಹೊಂದಿದ್ದು, ಇದರಲ್ಲಿ 2002ರಿಂದ 2024ರ ಅವಧಿಯಲ್ಲಿ ₹24 ಕೋಟಿ ವ್ಯವಹಾರ ನಡೆಸಿದ್ದಾರೆ. ಅಲ್ಲದೇ ಕರ್ನಾಟಕ ಬ್ಯಾಂಕ್ ಹಾಗೂ ಎಸ್ಬಿಐನಲ್ಲೂ ಖಾತೆ ಹೊಂದಿದ್ದು, ಹಣದ ವಹಿವಾಟುಗಳ ಕುರಿತು ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದರು.</p>.<p>ರಿಯಲ್ ಎಸ್ಟೇಟ್ ಉದ್ಯಮಿ ನಿಸಾರ್ ಅಹ್ಮದ್ ಅವರಿಗೆ ₹6 ಕೋಟಿ ವಂಚಿಸಿದ ಆರೋಪದಡಿ ರೇಖಾ (38), ಆಕೆಯ ಪತಿ ಮಂಜುನಾಥಾಚಾರಿ (40) ಮತ್ತು ಸ್ನೇಹಿತ ಚೇತನ್ (35) ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು.</p>.<p>‘ಮೂವರೂ ಸೇರಿ ಉದ್ಯಮಿಗೆ ವಂಚಿಸಿರುವುದಾಗಿ ವಿಚಾರಣೆ ವೇಳೆ ರೇಖಾ ತಿಳಿಸಿದ್ದಾಳೆ. ಸಾಲ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಮೋಸ ಮಾಡಿರುವುದಲ್ಲದೇ, ‘ಶೇರ್ಚಾಟ್’ ಆ್ಯಪ್ನಲ್ಲಿ ವ್ಯಕ್ತಿಯೊಬ್ಬರಿಗೆ ವಿಡಿಯೊ ಕರೆ ಮಾಡಿ, ₹31 ಲಕ್ಷ ಪಡೆದು ವಂಚಿಸಿದ್ದಾಳೆ. ಅಲ್ಲದೇ ಈಕೆ ವಿರುದ್ಧ ಹಲವು ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವುದು ತನಿಖೆ ವೇಳೆ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು. </p>.<p>ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>