<p><strong>ಬೆಂಗಳೂರು</strong>: ನಗರದ ಮಠವೊಂದರ ಅರ್ಚಕ ರಾಘವೇಂದ್ರ ಆಚಾರ್ಯ ಅವರಿಂದ ₹ 1.7 ಕೋಟಿ ಪಡೆದು ವಂಚಿಸಿದ್ದ ಆರೋಪದಡಿ ಶೇಷಗಿರಿ (45) ಎಂಬುವವರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಚೆನ್ನೈನ ಶೇಷಗಿರಿ, ಬಿ.ಕಾಂ ಪದವೀಧರ. ರಾಘವೇಂದ್ರ ಅವರು ನೀಡಿದ್ದ ದೂರಿನಲ್ಲಿ ಇತ್ತೀಚೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈತನನ್ನು ಬಂಧಿಸಿ ₹ 45 ಲಕ್ಷ ನಗದು ಹಾಗೂ ಆಸ್ತಿ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ತಮಿಳುನಾಡಿನ ಕಂಪನಿಯೊಂದರಲ್ಲಿ ಶೇಷಗಿರಿ ಕೆಲಸ ಮಾಡುತ್ತಿದ್ದ. ಷೇರು ಮಾರುಕಟ್ಟೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಈತ, ಅಲ್ಲಿಯ ಕೆಲಸ ಬಿಟ್ಟು ಕೆಲ ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದ. ಅರ್ಚಕ ರಾಘವೇಂದ್ರ ಅವರನ್ನು ಪರಿಚಯ ಮಾಡಿಕೊಂಡಿದ್ದ.’</p>.<p>‘ರಾಘವೇಂದ್ರ ಅವರು ನಿವೇಶನ ಖರೀದಿಸಲು ಹಣ ಹೊಂದಿಸುತ್ತಿದ್ದರು. ಅದನ್ನು ತಿಳಿದಿದ್ದ ಆರೋಪಿ, ‘ನಿಮ್ಮ ಬಳಿ ಇರುವ ಹಣವನ್ನು ನನಗೆ ಕೊಡಿ. ಷೇರು ಮಾರುಕಟ್ಟೆ ಮೂಲಕ ಕೆಲವೇ ದಿನಗಳಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುತ್ತೇನೆ’ ಎಂದಿದ್ದ. ನಂತರ, ಹಂತ ಹಂತವಾಗಿ ₹ 1.7 ಕೋಟಿ ಪಡೆದುಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಷೇರು ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿತ್ತು. ಇದರಿಂದಾಗಿ ಆರೋಪಿ ನಗರದಿಂದ ಪರಾರಿಯಾಗಿದ್ದ. ಹಣ ಕಳೆದುಕೊಂಡಿದ್ದ ರಾಘವೇಂದ್ರ, ಠಾಣೆ ಮೆಟ್ಟಿಲೇರಿದ್ದರು. ಕೆಲ ಸುಳಿವು ಆಧರಿಸಿ ತನಿಖೆ ಕೈಗೊಂಡಾಗ, ಆರೋಪಿ ಸಿಕ್ಕಿಬಿದ್ದ’ ಎಂದು ಹೇಳಿವೆ.</p>.<p>ಆಸ್ತಿ ಖರೀದಿ: ‘ಅರ್ಚಕರಿಂದ ಹಣ ಪಡೆದಿದ್ದ ಆರೋಪಿ ಶೇಷಗಿರಿ, ಆಸ್ತಿ ಖರೀದಿ ಮಾಡಿದ್ದಾನೆ. ಈ ಸಂಗತಿ ಅರ್ಚಕರಿಗೆ ಗೊತ್ತಿರಲಿಲ್ಲ. ಅದೇ ಆಸ್ತಿ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಮಠವೊಂದರ ಅರ್ಚಕ ರಾಘವೇಂದ್ರ ಆಚಾರ್ಯ ಅವರಿಂದ ₹ 1.7 ಕೋಟಿ ಪಡೆದು ವಂಚಿಸಿದ್ದ ಆರೋಪದಡಿ ಶೇಷಗಿರಿ (45) ಎಂಬುವವರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಚೆನ್ನೈನ ಶೇಷಗಿರಿ, ಬಿ.ಕಾಂ ಪದವೀಧರ. ರಾಘವೇಂದ್ರ ಅವರು ನೀಡಿದ್ದ ದೂರಿನಲ್ಲಿ ಇತ್ತೀಚೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈತನನ್ನು ಬಂಧಿಸಿ ₹ 45 ಲಕ್ಷ ನಗದು ಹಾಗೂ ಆಸ್ತಿ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ತಮಿಳುನಾಡಿನ ಕಂಪನಿಯೊಂದರಲ್ಲಿ ಶೇಷಗಿರಿ ಕೆಲಸ ಮಾಡುತ್ತಿದ್ದ. ಷೇರು ಮಾರುಕಟ್ಟೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಈತ, ಅಲ್ಲಿಯ ಕೆಲಸ ಬಿಟ್ಟು ಕೆಲ ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದ. ಅರ್ಚಕ ರಾಘವೇಂದ್ರ ಅವರನ್ನು ಪರಿಚಯ ಮಾಡಿಕೊಂಡಿದ್ದ.’</p>.<p>‘ರಾಘವೇಂದ್ರ ಅವರು ನಿವೇಶನ ಖರೀದಿಸಲು ಹಣ ಹೊಂದಿಸುತ್ತಿದ್ದರು. ಅದನ್ನು ತಿಳಿದಿದ್ದ ಆರೋಪಿ, ‘ನಿಮ್ಮ ಬಳಿ ಇರುವ ಹಣವನ್ನು ನನಗೆ ಕೊಡಿ. ಷೇರು ಮಾರುಕಟ್ಟೆ ಮೂಲಕ ಕೆಲವೇ ದಿನಗಳಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುತ್ತೇನೆ’ ಎಂದಿದ್ದ. ನಂತರ, ಹಂತ ಹಂತವಾಗಿ ₹ 1.7 ಕೋಟಿ ಪಡೆದುಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಷೇರು ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿತ್ತು. ಇದರಿಂದಾಗಿ ಆರೋಪಿ ನಗರದಿಂದ ಪರಾರಿಯಾಗಿದ್ದ. ಹಣ ಕಳೆದುಕೊಂಡಿದ್ದ ರಾಘವೇಂದ್ರ, ಠಾಣೆ ಮೆಟ್ಟಿಲೇರಿದ್ದರು. ಕೆಲ ಸುಳಿವು ಆಧರಿಸಿ ತನಿಖೆ ಕೈಗೊಂಡಾಗ, ಆರೋಪಿ ಸಿಕ್ಕಿಬಿದ್ದ’ ಎಂದು ಹೇಳಿವೆ.</p>.<p>ಆಸ್ತಿ ಖರೀದಿ: ‘ಅರ್ಚಕರಿಂದ ಹಣ ಪಡೆದಿದ್ದ ಆರೋಪಿ ಶೇಷಗಿರಿ, ಆಸ್ತಿ ಖರೀದಿ ಮಾಡಿದ್ದಾನೆ. ಈ ಸಂಗತಿ ಅರ್ಚಕರಿಗೆ ಗೊತ್ತಿರಲಿಲ್ಲ. ಅದೇ ಆಸ್ತಿ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>