‘ಲೋಹ ಲೇಪಿತ ರಟ್ಟನ್ನು ಜನರಿಗೆ ತೋರಿಸುತ್ತಿದ್ದ ಆರೋಪಿ, ‘ಇದು ಪುರಾತನ ಕಾಲದ ವಸ್ತು. ಅಂದಿನ ಕಾಲದ ರಾಜರು ಬಳಕೆ ಮಾಡುತ್ತಿದ್ದರು. ಇದನ್ನು ಮನೆಯಲ್ಲಿಟ್ಟು ಪೂಜೆ ಮಾಡಿದರೆ ಕಷ್ಟಗಳೆಲ್ಲ ಪರಿಹಾರವಾಗುತ್ತವೆ. ಹಣಕಾಸಿನ ವ್ಯವಹಾರ ಸುಧಾರಿಸಿ ಕೈ ತುಂಬ ಹಣ ಸಿಗುತ್ತದೆ’ ಎನ್ನುತ್ತಿದ್ದ. ಅದನ್ನು ನಂಬುತ್ತಿದ್ದ ಜನ, ರಟ್ಟು ಖರೀದಿಸಿ ಪೂಜೆ ಸಹ ಮಾಡುತ್ತಿದ್ದರು’ ಎಂದೂ ತಿಳಿಸಿದರು.