<p><strong>ಬೆಂಗಳೂರು:</strong> ಚೀಟಿಯಲ್ಲಿ ಹೂಡಿಕೆ ಮಾಡಿದ್ದ ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣದೊಂದಿಗೆ ಪರಾರಿಯಾದ ದಂಪತಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಂತ್ರಸ್ತರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ದೂರು ನೀಡಿದ್ದಾರೆ.</p>.<p>ಸುಮಾರು ₹10 ಕೋಟಿಗೂ ಅಧಿಕ ಹಣ ವಂಚಿಸಿರುವ ಆರೋಪಿಗಳಾದ ಸುಧಾ ಮತ್ತು ಸಿದ್ದಾಚಾರಿ ದಂಪತಿಯ ವಿರುದ್ಧ ದೂರು ನೀಡಲಾಗಿದ್ದು, ಒಂದು ತಿಂಗಳು ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ.ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿ, ನ್ಯಾಯ ಕೊಡಿಸಬೇಕು ಎಂದು ವಂಚನೆಗೊಳಗಾದವರು ಮನವಿ ಮಾಡಿದ್ದಾರೆ.</p>.<p>ಪ್ರಕರಣದ ಹಿನ್ನೆಲೆ: ಜೆ.ಪಿ. ನಗರದ 6ನೇ ಹಂತದ ಜರಗನಹಳ್ಳಿಯಲ್ಲಿ ವಾಸವಾಗಿದ್ದ ಸುಧಾ ಹಾಗೂ ಸಿದ್ಧಾಚಾರಿ ದಂಪತಿ 20 ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. ದಂಪತಿಯನ್ನು ನಂಬಿ ಸುಮಾರು 300ಕ್ಕೂ ಅಧಿಕ ಜನ ₹5 ಲಕ್ಷ ಹಾಗೂ ₹10 ಲಕ್ಷದ ಚೀಟಿಯಲ್ಲಿ ಹಣ ಹೂಡಿದ್ದರು. ಆದರೆ ಒಂದು ವರ್ಷದಿಂದ ದಂಪತಿ, ಚೀಟಿ ಹಣ ನೀಡದೆ ಸತಾಯಿಸುತ್ತಿದ್ದರು. ಜೂನ್ 3ರಂದು ರಾತ್ರಿ ತಮ್ಮ ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದರು. ಹಣ ಕಳೆದುಕೊಂಡು ಕಂಗಾಲಾದ ಸ್ಥಳೀಯರು ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದರು.</p>.<p>ಆರೋಪಿಗಳು ನೂರಾರು ಜನರಿಗೆ ₹10 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಅವರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚೀಟಿಯಲ್ಲಿ ಹೂಡಿಕೆ ಮಾಡಿದ್ದ ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣದೊಂದಿಗೆ ಪರಾರಿಯಾದ ದಂಪತಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಂತ್ರಸ್ತರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ದೂರು ನೀಡಿದ್ದಾರೆ.</p>.<p>ಸುಮಾರು ₹10 ಕೋಟಿಗೂ ಅಧಿಕ ಹಣ ವಂಚಿಸಿರುವ ಆರೋಪಿಗಳಾದ ಸುಧಾ ಮತ್ತು ಸಿದ್ದಾಚಾರಿ ದಂಪತಿಯ ವಿರುದ್ಧ ದೂರು ನೀಡಲಾಗಿದ್ದು, ಒಂದು ತಿಂಗಳು ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ.ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿ, ನ್ಯಾಯ ಕೊಡಿಸಬೇಕು ಎಂದು ವಂಚನೆಗೊಳಗಾದವರು ಮನವಿ ಮಾಡಿದ್ದಾರೆ.</p>.<p>ಪ್ರಕರಣದ ಹಿನ್ನೆಲೆ: ಜೆ.ಪಿ. ನಗರದ 6ನೇ ಹಂತದ ಜರಗನಹಳ್ಳಿಯಲ್ಲಿ ವಾಸವಾಗಿದ್ದ ಸುಧಾ ಹಾಗೂ ಸಿದ್ಧಾಚಾರಿ ದಂಪತಿ 20 ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. ದಂಪತಿಯನ್ನು ನಂಬಿ ಸುಮಾರು 300ಕ್ಕೂ ಅಧಿಕ ಜನ ₹5 ಲಕ್ಷ ಹಾಗೂ ₹10 ಲಕ್ಷದ ಚೀಟಿಯಲ್ಲಿ ಹಣ ಹೂಡಿದ್ದರು. ಆದರೆ ಒಂದು ವರ್ಷದಿಂದ ದಂಪತಿ, ಚೀಟಿ ಹಣ ನೀಡದೆ ಸತಾಯಿಸುತ್ತಿದ್ದರು. ಜೂನ್ 3ರಂದು ರಾತ್ರಿ ತಮ್ಮ ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದರು. ಹಣ ಕಳೆದುಕೊಂಡು ಕಂಗಾಲಾದ ಸ್ಥಳೀಯರು ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದರು.</p>.<p>ಆರೋಪಿಗಳು ನೂರಾರು ಜನರಿಗೆ ₹10 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಅವರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>