<p><strong>ಬೆಂಗಳೂರು:</strong> ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜೆ.ಪಿ.ನಗರದ ನಟರಾಜ್ ಬಡಾವಣೆಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಅಲ್ಲುರಿ ರಾಜು ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರರು ತಮ್ಮ ತಂಗಿಯನ್ನು ಎಂಬಿಬಿಎಸ್ ವ್ಯಾಸಂಗಕ್ಕೆ ಸೇರಿಸಲು ಪ್ರಯತ್ನಿಸುತ್ತಿದ್ದರು. ಅದಕ್ಕಾಗಿ ಹಲವು ಕಾಲೇಜುಗಳಿಗೆ ಅರ್ಜಿ ಸಲ್ಲಿಸಿದ್ದರು. ಅಲ್ಲುರಿ ರಾಜು ಹೆಸರು ಹೇಳಿಕೊಂಡು ದೂರುದಾರರಿಗೆ ಕರೆ ಮಾಡಿದ್ದ ಆರೋಪಿ, ಸುಲಭವಾಗಿ ಎಂಬಿ<br />ಬಿಎಸ್ ಸೀಟು ಕೊಡಿಸುವುದಾಗಿ ಹೇಳಿದ್ದ. ಅದಕ್ಕೆ ಹಣ ಖರ್ಚಾಗುವುದಾಗಿಯೂ ತಿಳಿಸಿದ್ದ.’</p>.<p>‘ಆರೋಪಿ ಮಾತು ನಂಬಿದ್ದ ದೂರು<br />ದಾರರು, ಹಂತ ಹಂತವಾಗಿ ₹ 2.37 ಲಕ್ಷ ನೀಡಿದ್ದರು. ಆದರೆ, ಆರೋಪಿ ಯಾವುದೇ ಸೀಟು ಕೊಡಿಸಿಲ್ಲ. ಹಣ<br />ವನ್ನೂ ವಾಪಸು ನೀಡದೇ ನಾಪತ್ತೆಯಾಗಿದ್ದಾನೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜೆ.ಪಿ.ನಗರದ ನಟರಾಜ್ ಬಡಾವಣೆಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಅಲ್ಲುರಿ ರಾಜು ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರರು ತಮ್ಮ ತಂಗಿಯನ್ನು ಎಂಬಿಬಿಎಸ್ ವ್ಯಾಸಂಗಕ್ಕೆ ಸೇರಿಸಲು ಪ್ರಯತ್ನಿಸುತ್ತಿದ್ದರು. ಅದಕ್ಕಾಗಿ ಹಲವು ಕಾಲೇಜುಗಳಿಗೆ ಅರ್ಜಿ ಸಲ್ಲಿಸಿದ್ದರು. ಅಲ್ಲುರಿ ರಾಜು ಹೆಸರು ಹೇಳಿಕೊಂಡು ದೂರುದಾರರಿಗೆ ಕರೆ ಮಾಡಿದ್ದ ಆರೋಪಿ, ಸುಲಭವಾಗಿ ಎಂಬಿ<br />ಬಿಎಸ್ ಸೀಟು ಕೊಡಿಸುವುದಾಗಿ ಹೇಳಿದ್ದ. ಅದಕ್ಕೆ ಹಣ ಖರ್ಚಾಗುವುದಾಗಿಯೂ ತಿಳಿಸಿದ್ದ.’</p>.<p>‘ಆರೋಪಿ ಮಾತು ನಂಬಿದ್ದ ದೂರು<br />ದಾರರು, ಹಂತ ಹಂತವಾಗಿ ₹ 2.37 ಲಕ್ಷ ನೀಡಿದ್ದರು. ಆದರೆ, ಆರೋಪಿ ಯಾವುದೇ ಸೀಟು ಕೊಡಿಸಿಲ್ಲ. ಹಣ<br />ವನ್ನೂ ವಾಪಸು ನೀಡದೇ ನಾಪತ್ತೆಯಾಗಿದ್ದಾನೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>