<p><strong>ಬೆಂಗಳೂರು:</strong> ಸಂಸದ ತೇಜಸ್ವಿ ಸೂರ್ಯ ಕಚೇರಿ ಸಿಬ್ಬಂದಿ ಎಂಬುದಾಗಿ ಸುಳ್ಳು ಹೇಳಿಕೊಂಡು ರೆಮ್ಡಿಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಆರೋಪದಡಿ ಚೇತನ್ (26) ಎಂಬಾತನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಗ್ರಹಾರ ದಾಸರಹಳ್ಳಿ ನಿವಾಸಿ ಚೇತನ್, ಸ್ಥಳೀಯ ವಾರ್ರೂಮ್ನಲ್ಲಿ ಕೆಲಸ ಮಾಡುತ್ತಿದ್ದ. ಸಂಸದ ತೇಜಸ್ವಿ ಸೂರ್ಯ ಹೆಸರು ಬಳಸಿಕೊಂಡು ಚುಚ್ಚುಮದ್ದು ಮಾರುತ್ತಿದ್ದ. ಈ ಬಗ್ಗೆ ಸಂಸದ ಕಚೇರಿಯ ಆಪ್ತ ಸಹಾಯಕ ಭಾನುಪ್ರಕಾಶ್ ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಭಾನುಪ್ರಕಾಶ್ ಅವರ ಪರಿಚಯಸ್ಥರೊಬ್ಬರಿಗೆ ಕರೆ ಮಾಡಿದ್ದ ಆರೋಪಿ ಚೇತನ್, ‘ನಾನು ತೇಜಸ್ವಿ ಸೂರ್ಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಮ್ಮ ಕೋವಿಡ್ ರೋಗಿ ಚಿಕಿತ್ಸೆಗೆ ರೆಮ್ಡಿಸಿವಿರ್ ಚುಚ್ಚುಮದ್ದು ಅಗತ್ಯವಿದೆ. ₹ 10,000 ಕೊಟ್ಟರೆ ಚುಚ್ಚುಮದ್ದು ವ್ಯವಸ್ಥೆ ಮಾಡುತ್ತೇನೆ’ ಎಂದಿದ್ದ.’</p>.<p>‘ವಿಷಯ ತಿಳಿದ ಭಾನುಪ್ರಕಾಶ್ ಸಹ ಆರೋಪಿಗೆ ಕರೆ ಮಾಡಿ ಮಾತನಾಡಿದ್ದರು. ಅವರ ಬಳಿಯೂ ಆರೋಪಿ, ಸಂಸದರ ಕಚೇರಿ ಸಿಬ್ಬಂದಿ ಎಂದೇ ಮಾತನಾಡಿದ್ದ. ಹೆಸರು ಕೇಳಿದಾಗ, ಶಿವಲಿಂಗಯ್ಯ ಎಂದಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಸಂಸದ ತೇಜಸ್ವಿ ಸೂರ್ಯ ಹೆಸರು ಹಾಳು ಮಾಡುವುದು ಹಾಗೂ ಅವರ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸಿ ಹಣ ಸಂಪಾದಿಸುವುದು ಆರೋಪಿ ಉದ್ದೇಶವಾಗಿತ್ತು ಎಂದು ಭಾನುಪ್ರಕಾಶ್ ದೂರಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದ್ದು, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಸದ ತೇಜಸ್ವಿ ಸೂರ್ಯ ಕಚೇರಿ ಸಿಬ್ಬಂದಿ ಎಂಬುದಾಗಿ ಸುಳ್ಳು ಹೇಳಿಕೊಂಡು ರೆಮ್ಡಿಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಆರೋಪದಡಿ ಚೇತನ್ (26) ಎಂಬಾತನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಗ್ರಹಾರ ದಾಸರಹಳ್ಳಿ ನಿವಾಸಿ ಚೇತನ್, ಸ್ಥಳೀಯ ವಾರ್ರೂಮ್ನಲ್ಲಿ ಕೆಲಸ ಮಾಡುತ್ತಿದ್ದ. ಸಂಸದ ತೇಜಸ್ವಿ ಸೂರ್ಯ ಹೆಸರು ಬಳಸಿಕೊಂಡು ಚುಚ್ಚುಮದ್ದು ಮಾರುತ್ತಿದ್ದ. ಈ ಬಗ್ಗೆ ಸಂಸದ ಕಚೇರಿಯ ಆಪ್ತ ಸಹಾಯಕ ಭಾನುಪ್ರಕಾಶ್ ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಭಾನುಪ್ರಕಾಶ್ ಅವರ ಪರಿಚಯಸ್ಥರೊಬ್ಬರಿಗೆ ಕರೆ ಮಾಡಿದ್ದ ಆರೋಪಿ ಚೇತನ್, ‘ನಾನು ತೇಜಸ್ವಿ ಸೂರ್ಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಮ್ಮ ಕೋವಿಡ್ ರೋಗಿ ಚಿಕಿತ್ಸೆಗೆ ರೆಮ್ಡಿಸಿವಿರ್ ಚುಚ್ಚುಮದ್ದು ಅಗತ್ಯವಿದೆ. ₹ 10,000 ಕೊಟ್ಟರೆ ಚುಚ್ಚುಮದ್ದು ವ್ಯವಸ್ಥೆ ಮಾಡುತ್ತೇನೆ’ ಎಂದಿದ್ದ.’</p>.<p>‘ವಿಷಯ ತಿಳಿದ ಭಾನುಪ್ರಕಾಶ್ ಸಹ ಆರೋಪಿಗೆ ಕರೆ ಮಾಡಿ ಮಾತನಾಡಿದ್ದರು. ಅವರ ಬಳಿಯೂ ಆರೋಪಿ, ಸಂಸದರ ಕಚೇರಿ ಸಿಬ್ಬಂದಿ ಎಂದೇ ಮಾತನಾಡಿದ್ದ. ಹೆಸರು ಕೇಳಿದಾಗ, ಶಿವಲಿಂಗಯ್ಯ ಎಂದಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಸಂಸದ ತೇಜಸ್ವಿ ಸೂರ್ಯ ಹೆಸರು ಹಾಳು ಮಾಡುವುದು ಹಾಗೂ ಅವರ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸಿ ಹಣ ಸಂಪಾದಿಸುವುದು ಆರೋಪಿ ಉದ್ದೇಶವಾಗಿತ್ತು ಎಂದು ಭಾನುಪ್ರಕಾಶ್ ದೂರಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದ್ದು, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>