ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರಿಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಸ್ಎಲ್ ಸ್ಟೀಲ್ಸ್ ಕಂಪನಿ ಮ್ಯಾನೇಜರ್ ರಾಘವೇಂದ್ರ ಘೋಡ್ಕೆ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಶನಿವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದ್ದಾರೆ.
ಈ ಮೊದಲು ಮೂರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಕೋರ್ಟ್ಗೆ ಗೈರಾದ ಕಾರಣ ಆರೋಪಿ ನಾಗೇಂದ್ರ ಅವರನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಲು ಆದೇಶಿಸಲಾಗಿದೆ.
ವಿಚಾರಣೆಯನ್ನು ಅ. 31ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಮೂರನೇ ಆರೋಪಿಯಾಗಿದ್ದಾರೆ.