<p><strong>ಬೆಂಗಳೂರು</strong>: ಶೌಚಾಲಯ ಶುಚಿಗೊಳಿಸುವ ರಾಸಾಯನಿಕವನ್ನು ಯುವಕನ ಮೇಲೆ ಎರಚಿ ಗಾಯಗೊಳಿಸಿದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಆರೋಪಿ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.</p>.<p>ಗಾಯಗೊಂಡಿರುವ, ವೃಷಭಾವತಿ ನಗರದ ನಿವಾಸಿ ನಾಗೇಶ್ ಕೊಂಡಾ(21) ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ನಾಗೇಶ್ ಅವರ ಎಡಕಣ್ಣು, ಮುಖ ಹಾಗೂ ತುಟಿಗೆ ಸುಟ್ಟ ಗಾಯವಾಗಿದೆ. ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಾರ್ಖಾನೆಯೊಂದರಲ್ಲಿ ಫಿಟ್ಟರ್ ಆಗಿ ನಾಗೇಶ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸಕ್ಕೆ ರಜೆ ಇದ್ದ ಕಾರಣ ವೈನ್ ಸ್ಟೋರ್ಗೆ ಬಂದು ಮದ್ಯ ಸೇವಿಸಿ, ಊಟ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಮದ್ಯದಂಗಡಿ ಬಳಿ ಬಂದ ದುಷ್ಕರ್ಮಿ, ನಾಗೇಶ್ ಮುಖಕ್ಕೆ ರಾಸಾಯನಿಕ ಎರಚಿ ಪರಾರಿಯಾಗಿದ್ದ.</p>.<p>ನಾಗೇಶ್ ಅವರು ಈ ಹಿಂದೆ ವೈಟ್ಫೀಲ್ಡ್ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ ಮನೆಯ ಎದುರೇ ಯುವತಿಯೊಬ್ಬರು ವಾಸಿಸುತ್ತಿದ್ದರು. ಆಕೆಯ ಜತೆಗೆ ನಾಗೇಶ್ ಅವರು ಫೋನ್ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವಿಷಯ ತಿಳಿದು ಯುವತಿ ಕಡೆಯ ವ್ಯಕ್ತಿಯೇ ರಾಸಾಯನಿಕ ಎರಚಿರುವ ಸಾಧ್ಯತೆಯಿದೆ. ಆರೋಪಿಯ ಬಗ್ಗೆ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶೌಚಾಲಯ ಶುಚಿಗೊಳಿಸುವ ರಾಸಾಯನಿಕವನ್ನು ಯುವಕನ ಮೇಲೆ ಎರಚಿ ಗಾಯಗೊಳಿಸಿದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಆರೋಪಿ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.</p>.<p>ಗಾಯಗೊಂಡಿರುವ, ವೃಷಭಾವತಿ ನಗರದ ನಿವಾಸಿ ನಾಗೇಶ್ ಕೊಂಡಾ(21) ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ನಾಗೇಶ್ ಅವರ ಎಡಕಣ್ಣು, ಮುಖ ಹಾಗೂ ತುಟಿಗೆ ಸುಟ್ಟ ಗಾಯವಾಗಿದೆ. ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಾರ್ಖಾನೆಯೊಂದರಲ್ಲಿ ಫಿಟ್ಟರ್ ಆಗಿ ನಾಗೇಶ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸಕ್ಕೆ ರಜೆ ಇದ್ದ ಕಾರಣ ವೈನ್ ಸ್ಟೋರ್ಗೆ ಬಂದು ಮದ್ಯ ಸೇವಿಸಿ, ಊಟ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಮದ್ಯದಂಗಡಿ ಬಳಿ ಬಂದ ದುಷ್ಕರ್ಮಿ, ನಾಗೇಶ್ ಮುಖಕ್ಕೆ ರಾಸಾಯನಿಕ ಎರಚಿ ಪರಾರಿಯಾಗಿದ್ದ.</p>.<p>ನಾಗೇಶ್ ಅವರು ಈ ಹಿಂದೆ ವೈಟ್ಫೀಲ್ಡ್ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ ಮನೆಯ ಎದುರೇ ಯುವತಿಯೊಬ್ಬರು ವಾಸಿಸುತ್ತಿದ್ದರು. ಆಕೆಯ ಜತೆಗೆ ನಾಗೇಶ್ ಅವರು ಫೋನ್ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವಿಷಯ ತಿಳಿದು ಯುವತಿ ಕಡೆಯ ವ್ಯಕ್ತಿಯೇ ರಾಸಾಯನಿಕ ಎರಚಿರುವ ಸಾಧ್ಯತೆಯಿದೆ. ಆರೋಪಿಯ ಬಗ್ಗೆ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>