<p><strong>ಕೆ.ಆರ್.ಪುರ:</strong> ರಥಸಪ್ತಮಿ ಪ್ರಯುಕ್ತ ವರ್ತೂರಿನಲ್ಲಿ ಶ್ರೀ ಭೂನಿಳಾ ಸಮೇತ ಚನ್ನರಾಯಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.</p>.<p>ದೇವಾಲಯದಲ್ಲಿ ಚನ್ನರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು. ನಂತರ ರಥದಲ್ಲಿ ಕೂರಿಸಿ ಅಲಂಕರಿಸಿ ರಥ ಎಳೆಯಲಾಯಿತು.</p>.<p>ರಥೋತ್ಸವ ಅಂಗವಾಗಿ ಚನ್ನರಾಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಪೂಜಾ ಕೈಂಕರ್ಯಗಳು ನಡೆದವು. ವರ್ತೂರಿನ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಾಗಿತು. ಈ ಉತ್ಸವದಲ್ಲಿ ತಮಟೆ, ಪೂಜಾಕುಣಿತ, ನಾದಸ್ವರ, ಚಿಂಗಾರಿ ಮೇಳ, ಚಂಡಿ ಮೇಳ, ಚಟ್ಟಿಮೇಳ, ವೀರಗಾಸೆ, ಗಾರುಡಿಗೊಂಬೆ, ಡೊಳ್ಳು ಕುಣಿತ ಗಮನಸೆಳೆಯಿತು.</p>.<p>ರಥೋತ್ಸವಕ್ಕೆ ಸುತ್ತಮುತ್ತಲಿನ ವೈಟ್ ಫೀಲ್ಡ್, ಬಳಗೆರೆ, ಸೊರುಹುಣಸೆ, ಗುಂಜೂರು, ವಾಲೇಪುರ, ಮಧುರನಗರ, ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಮಂಜುಳಾ ಲಿಂಬಾವಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಎಚ್.ನಾಗೇಶ್, ಮುಖಂಡರಾದ ಕುಪ್ಪಿ ಮಂಜುನಾಥ್, ವರ್ತೂರು ಶ್ರೀಧರ್, ಮಹೇಂದ್ರ ಮೋದಿ, ಶ್ರೀಧರ್ ರೆಡ್ಡಿ, ಹೂಡಿ ಪಿಳ್ಳಪ್ಪ, ಮನೋಹರ್ ರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ರಥಸಪ್ತಮಿ ಪ್ರಯುಕ್ತ ವರ್ತೂರಿನಲ್ಲಿ ಶ್ರೀ ಭೂನಿಳಾ ಸಮೇತ ಚನ್ನರಾಯಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.</p>.<p>ದೇವಾಲಯದಲ್ಲಿ ಚನ್ನರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು. ನಂತರ ರಥದಲ್ಲಿ ಕೂರಿಸಿ ಅಲಂಕರಿಸಿ ರಥ ಎಳೆಯಲಾಯಿತು.</p>.<p>ರಥೋತ್ಸವ ಅಂಗವಾಗಿ ಚನ್ನರಾಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಪೂಜಾ ಕೈಂಕರ್ಯಗಳು ನಡೆದವು. ವರ್ತೂರಿನ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಾಗಿತು. ಈ ಉತ್ಸವದಲ್ಲಿ ತಮಟೆ, ಪೂಜಾಕುಣಿತ, ನಾದಸ್ವರ, ಚಿಂಗಾರಿ ಮೇಳ, ಚಂಡಿ ಮೇಳ, ಚಟ್ಟಿಮೇಳ, ವೀರಗಾಸೆ, ಗಾರುಡಿಗೊಂಬೆ, ಡೊಳ್ಳು ಕುಣಿತ ಗಮನಸೆಳೆಯಿತು.</p>.<p>ರಥೋತ್ಸವಕ್ಕೆ ಸುತ್ತಮುತ್ತಲಿನ ವೈಟ್ ಫೀಲ್ಡ್, ಬಳಗೆರೆ, ಸೊರುಹುಣಸೆ, ಗುಂಜೂರು, ವಾಲೇಪುರ, ಮಧುರನಗರ, ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಮಂಜುಳಾ ಲಿಂಬಾವಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಎಚ್.ನಾಗೇಶ್, ಮುಖಂಡರಾದ ಕುಪ್ಪಿ ಮಂಜುನಾಥ್, ವರ್ತೂರು ಶ್ರೀಧರ್, ಮಹೇಂದ್ರ ಮೋದಿ, ಶ್ರೀಧರ್ ರೆಡ್ಡಿ, ಹೂಡಿ ಪಿಳ್ಳಪ್ಪ, ಮನೋಹರ್ ರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>