<p><strong>ರಾಜರಾಜೇಶ್ವರಿನಗರ:</strong> ಗಣಿ ಬಾಧಿತ ವ್ಯಾಪ್ತಿಯ ಪಚ್ಚೆಪಾಳ್ಯ, ಬಸಮ್ಮನಹಳ್ಳಿ, ಶಾಂತಿನಗರ, ಸಿ.ಕೆ.ತಾಂಡ್ಯ ಗ್ರಾಮಗಳ 500 ಕುಟುಂಬಗಳಿಗೆ ಪರಿಹಾರವಾಗಿ ತಲಾ ₹ 30 ಸಾವಿರ ಮೊತ್ತದ ಚೆಕ್ಗಳನ್ನು ಶಾಸಕ ಎಸ್.ಟಿ.ಸೋಮಶೇಖರ್ ಅವರು ವಿತರಿಸಿದರು.</p>.<p>ಕ್ರಷರ್ ಮಾಲಿಕರ ಸಂಘದ ವತಿಯಿಂದ ನೀಡಿದ ಚೆಕ್ಗಳನ್ನು ವಿತರಿಸಿ ಮಾತನಾಡಿದ ಅವರು, ‘10 ವರ್ಷಗಳಿಂದ ಪರಿಹಾರ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ’ ಎಂದರು.</p>.<p>ಕರ್ನಾಟಕ ರಾಜ್ಯ ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಸಿದ್ದರಾಜು ಮಾತನಾಡಿ, ‘ಈ ಬಾರಿ 1200 ಕುಟುಂಬಗಳಿಗೆ ತಲಾ ₹30 ಸಾವಿರದಿಂದ ₹50 ಸಾವಿರದವರೆಗೆ ಚೆಕ್ಗಳನ್ನು ನೀಡಲಾಗಿದೆ. ಎಲ್ಲರಿಗೂ ಅಗತ್ಯವಾದ ಕಾರ್ಯಕ್ರಮಗಳನ್ನು ಶಾಸಕರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಹಾಪ್ಕಾಮ್ಸ್ ನಿರ್ದೇಶಕ ಎಂ.ಜೈಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಉಮಾಶಂಕರ್, ಪಚ್ಚೆಪಾಳ್ಯ ಶಿವರಾಮಣ್ಣ, ದೊಡ್ಡೇರಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಜನಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ಗಣಿ ಬಾಧಿತ ವ್ಯಾಪ್ತಿಯ ಪಚ್ಚೆಪಾಳ್ಯ, ಬಸಮ್ಮನಹಳ್ಳಿ, ಶಾಂತಿನಗರ, ಸಿ.ಕೆ.ತಾಂಡ್ಯ ಗ್ರಾಮಗಳ 500 ಕುಟುಂಬಗಳಿಗೆ ಪರಿಹಾರವಾಗಿ ತಲಾ ₹ 30 ಸಾವಿರ ಮೊತ್ತದ ಚೆಕ್ಗಳನ್ನು ಶಾಸಕ ಎಸ್.ಟಿ.ಸೋಮಶೇಖರ್ ಅವರು ವಿತರಿಸಿದರು.</p>.<p>ಕ್ರಷರ್ ಮಾಲಿಕರ ಸಂಘದ ವತಿಯಿಂದ ನೀಡಿದ ಚೆಕ್ಗಳನ್ನು ವಿತರಿಸಿ ಮಾತನಾಡಿದ ಅವರು, ‘10 ವರ್ಷಗಳಿಂದ ಪರಿಹಾರ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ’ ಎಂದರು.</p>.<p>ಕರ್ನಾಟಕ ರಾಜ್ಯ ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಸಿದ್ದರಾಜು ಮಾತನಾಡಿ, ‘ಈ ಬಾರಿ 1200 ಕುಟುಂಬಗಳಿಗೆ ತಲಾ ₹30 ಸಾವಿರದಿಂದ ₹50 ಸಾವಿರದವರೆಗೆ ಚೆಕ್ಗಳನ್ನು ನೀಡಲಾಗಿದೆ. ಎಲ್ಲರಿಗೂ ಅಗತ್ಯವಾದ ಕಾರ್ಯಕ್ರಮಗಳನ್ನು ಶಾಸಕರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಹಾಪ್ಕಾಮ್ಸ್ ನಿರ್ದೇಶಕ ಎಂ.ಜೈಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಉಮಾಶಂಕರ್, ಪಚ್ಚೆಪಾಳ್ಯ ಶಿವರಾಮಣ್ಣ, ದೊಡ್ಡೇರಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಜನಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>