ಘಟನೆ ಬಗ್ಗೆ ಟ್ವೀಟ್ ಮಾಡಿರುವ ಸಚಿವೆ ಶಶಿಕಲಾ ಜೊಲ್ಲೆ, ‘ಬೆಂಗಳೂರಿನಲ್ಲಿ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ಖಂಡನೀಯ. ತಾಯ್ನಾಡಿನ ರಕ್ಷಣೆಗಾಗಿ ಹಾಗೂ ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದಹೆಮ್ಮೆಯ ನಾಯಕ ಶಿವಾಜಿ ಮಹಾರಾಜರು. ಆದರೆ, ಇಂತಹ ಅಪ್ರತಿಮ ವೀರರ ಪ್ರತಿಮೆಗೆ ಮಸಿ ಬಳಿದಿರುವುದು ಆಪಾದನೀಯ’ ಎಂದಿದ್ದಾರೆ.