ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಯನ್ನು ಹುಡುಕಿ ಕೊಡಿ ಎಂದು ಬೆಂಗಳೂರು ಪೊಲೀಸರಿಗೆ ಛತ್ತೀಸಗಡ ವ್ಯಕ್ತಿ ಮೊರೆ

Last Updated 14 ಮಾರ್ಚ್ 2023, 9:57 IST
ಅಕ್ಷರ ಗಾತ್ರ

ಬೆಂಗಳೂರು: ‘ನನ್ನ ಪತ್ನಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ನನ್ನ ಪತ್ನಿಯನ್ನು ಹುಡುಕಿಕೊಡಿ’ ಎಂದು ಛತ್ತೀಸಗಡದ ಕುಂತಲ್ ಬ್ಯಾನರ್ಜಿ ಎಂಬುವವರು ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವುದಾಗಿ ಹೇಳಿರುವ ಕಮಿಷನರ್ ಕಚೇರಿ ಸಿಬ್ಬಂದಿ, ‘ಸಂಬಂಧಿತ ಠಾಣೆಗೆ ಮಾಹಿತಿ ನೀಡಲಾಗಿದೆ’ ಎಂದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.

‘ಪತ್ನಿ ಜೊತೆ ಛತ್ತೀಸಗಡದಲ್ಲಿ ವಾಸವಿದ್ದೆ. ಪತ್ನಿ ಅಪಹರಿಸಿರುವ ಅಪರಿಚಿತ ಬೆಂಗಳೂರಿನಲ್ಲಿ ನೆಲೆಸಿರುವ ಮಾಹಿತಿ ಇದೆ’ ಎಂದು ಕುಂತಲ್ ಹೇಳಿದ್ದಾರೆ. ಆರೋಪಿಯ ಮೊಬೈಲ್ ನಂಬರ್ ಹಾಗೂ ಫೋಟೊವನ್ನು ಟ್ವೀಟ್ ಜೊತೆ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT