<p><strong>ಬೆಂಗಳೂರು:</strong> ಚಿಕ್ಕಪೇಟೆಯಲ್ಲಿ ಸೀರೆ ಖರೀದಿಗೆ ಬಂದಿದ್ದ ವೃದ್ಧರೊಬ್ಬರನ್ನು ಸುತ್ತುವರೆದು ಬೆದರಿಸಿದ್ದ ನಾಲ್ವರು ದುಷ್ಕರ್ಮಿಗಳು, ₹ 1.25 ಲಕ್ಷ ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಟಿ. ದಾಸರಹಳ್ಳಿ ನಿವಾಸಿಯಾದ 62 ವರ್ಷದ ವೃದ್ಧ ಸುಲಿಗೆ ಬಗ್ಗೆ ದೂರು ನೀಡಿದ್ದಾರೆ. ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪತ್ನಿ, ಮಗ, ಸೊಸೆ ಜೊತೆಯಲ್ಲಿ ಸೀರೆ ಖರೀದಿಸಲೆಂದು ಅ. 16ರಂದು ವೃದ್ಧ ಚಿಕ್ಕಪೇಟೆಗೆ ಬಂದಿದ್ದರು. ಮಧ್ಯಾಹ್ನ 1.30ರ ಸುಮಾರಿಗೆ ಚಿಕ್ಕಪೇಟೆಯ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಪತ್ನಿ, ಮಗ ಹಾಗೂ ಸೊಸೆ ಸ್ವಲ್ಪ ದೂರದಲ್ಲಿದ್ದರು.’</p>.<p>‘ವೃದ್ಧನನ್ನು ಅಡ್ಡಗಟ್ಟಿದ್ದ ನಾಲ್ವರು, ಸುತ್ತುವರೆದು ನಿಂತಿದ್ದರು. ಅತ್ತಿತ್ತ ಅಲುಗಾಡಲು ಸಹ ವೃದ್ಧನಿಗೆ ಸಾಧ್ಯವಾಗಿರಲಿಲ್ಲ. ವೃದ್ಧನ ಜೇಬಿಗೆ ಕೈ ಹಾಕಿದ್ದ ಆರೋಪಿ, ₹ 1.25 ಲಕ್ಷ ತೆಗೆದುಕೊಂಡಿದ್ದ. ನಂತರ, ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದೂ ತಿಳಿಸಿದರು.</p>.<p>‘ವೃದ್ಧನನ್ನು ಹಿಂಬಾಲಿಸಿ ಆರೋಪಿಗಳು ಕೃತ್ಯ ಎಸಗಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳ ಪತ್ತೆಗೆ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿಕ್ಕಪೇಟೆಯಲ್ಲಿ ಸೀರೆ ಖರೀದಿಗೆ ಬಂದಿದ್ದ ವೃದ್ಧರೊಬ್ಬರನ್ನು ಸುತ್ತುವರೆದು ಬೆದರಿಸಿದ್ದ ನಾಲ್ವರು ದುಷ್ಕರ್ಮಿಗಳು, ₹ 1.25 ಲಕ್ಷ ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಟಿ. ದಾಸರಹಳ್ಳಿ ನಿವಾಸಿಯಾದ 62 ವರ್ಷದ ವೃದ್ಧ ಸುಲಿಗೆ ಬಗ್ಗೆ ದೂರು ನೀಡಿದ್ದಾರೆ. ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪತ್ನಿ, ಮಗ, ಸೊಸೆ ಜೊತೆಯಲ್ಲಿ ಸೀರೆ ಖರೀದಿಸಲೆಂದು ಅ. 16ರಂದು ವೃದ್ಧ ಚಿಕ್ಕಪೇಟೆಗೆ ಬಂದಿದ್ದರು. ಮಧ್ಯಾಹ್ನ 1.30ರ ಸುಮಾರಿಗೆ ಚಿಕ್ಕಪೇಟೆಯ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಪತ್ನಿ, ಮಗ ಹಾಗೂ ಸೊಸೆ ಸ್ವಲ್ಪ ದೂರದಲ್ಲಿದ್ದರು.’</p>.<p>‘ವೃದ್ಧನನ್ನು ಅಡ್ಡಗಟ್ಟಿದ್ದ ನಾಲ್ವರು, ಸುತ್ತುವರೆದು ನಿಂತಿದ್ದರು. ಅತ್ತಿತ್ತ ಅಲುಗಾಡಲು ಸಹ ವೃದ್ಧನಿಗೆ ಸಾಧ್ಯವಾಗಿರಲಿಲ್ಲ. ವೃದ್ಧನ ಜೇಬಿಗೆ ಕೈ ಹಾಕಿದ್ದ ಆರೋಪಿ, ₹ 1.25 ಲಕ್ಷ ತೆಗೆದುಕೊಂಡಿದ್ದ. ನಂತರ, ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದೂ ತಿಳಿಸಿದರು.</p>.<p>‘ವೃದ್ಧನನ್ನು ಹಿಂಬಾಲಿಸಿ ಆರೋಪಿಗಳು ಕೃತ್ಯ ಎಸಗಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳ ಪತ್ತೆಗೆ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>