ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಪಿ. ನಡ್ಡಾ ಜತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ

Last Updated 8 ಸೆಪ್ಟೆಂಬರ್ 2021, 20:20 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.

ಸುಮಾರು 20 ನಿಮಿಷಗಳ ಮಾತುಕತೆಯ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ಮಹಾನಗರಪಾಲಿಕೆ ಚುನಾವಣೆಗಳ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದರು.

ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಮಾತುಕತೆ ನಡೆಯಲಿಲ್ಲ. ನಾಲ್ಕು ಸಚಿವ ಸ್ಥಾನಗಳು ಖಾಲಿ ಉಳಿದಿವೆ. ಬೊಮ್ಮಾಯಿ ಜತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೂ ಇದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಗಳ ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸಲು ಬಂದಿದ್ದ ಬೊಮ್ಮಾಯಿ ಅವರು ಕೇಂದ್ರದ ಹಲವು ಸಚಿವರನ್ನೂ ಭೇಟಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT