ಬಿಬಿಎಂಪಿ ವಾರ್ಡ್ಗಳ ಪುನರ್ವಿಂಗಡಣೆ ಕಾರ್ಯ ಪೂರ್ಣಗೊಳ್ಳುತ್ತಾ ಬಂದಿದೆ. ಪುನರ್ವಿಂಗಡಣೆ ಪೂರ್ಣಗೊಂಡ ತಕ್ಷಣ ಅಧಿಸೂಚನೆ ಹೊರಡಿಸುತ್ತೇವೆ. ಒಬಿಸಿ ಮೀಸಲಾತಿ ನಿಗದಿ ಮಾಡುವುದಕ್ಕೆ ಸಂಬಂಧಿಸಿದಂತೆ ನ್ಯಾ.ಭಕ್ತವತ್ಸಲಂ ಸಮಿತಿಯೂ ಎಂಟು ವಾರಗಳೊಳಗೆ ವರದಿ ನೀಡಲಿದೆ. ಚುನಾವಣೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ. ಸುಪ್ರೀಂಕೋರ್ಟ್ ಹೇಳಿದ ಮೇಲೆ ಅದನ್ನು ಪಾಲನೆ ಮಾಡುತ್ತೇವೆ. ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತುವ ಪ್ರಶ್ನೆಯೇ ಇಲ್ಲ ಎಂದು ಬೊಮ್ಮಾಯಿ ತಿಳಿಸಿದರು.