ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ವಿಚಾರಿಸಿದರು.
ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಜತೆಗಿದ್ದರು.
ಸದಾನಂದಗೌಡರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಚಿತ್ರದುರ್ಗದಲ್ಲಿ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿತ್ರದುರ್ಗದಲ್ಲಿರುವ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿಸಚಿವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ನಲ್ಲಿ ಜೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಕರೆ ತರಲಾಯಿತು.