<p><strong>ಹೆಸರಘಟ್ಟ: </strong>ಬೆಂಗಳೂರು ಮಾತ್ರವಲ್ಲದೇ ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿದ್ದ ಉತ್ತರ ಭಾರತದ ರಾಜ್ಯಗಳ ವಲಸೆ ಕಾರ್ಮಿಕರು ಶ್ರಮಿಕ್ ರೈಲಿನಲ್ಲಿ ಸೋಮವಾರ ತಾಯ್ನಾಡಿನತ್ತ ಪ್ರಯಾಣ ಬೆಳೆಸಿದರು.</p>.<p>ಬೆಂಗಳೂರು ಹೊರವಲಯದ ಚಿಕ್ಕಬಾಣಾವರ ರೈಲು ನಿಲ್ದಾಣದಿಂದ ಎರಡು ರೈಲುಗಳಲ್ಲಿ ಕಾರ್ಮಿಕರನ್ನು ಬೀಳ್ಕೊಡಲಾಯಿತು.</p>.<p>ಕೆಎಸ್ಆರ್ಟಿಸಿ ಬಸ್ಗಳ ಮೂಲಕ 3000ಕ್ಕೂ ಹೆಚ್ಚು ಕಾರ್ಮಿಕರನ್ನು ನಿಲ್ದಾಣಕ್ಕೆ ಕರೆತರಲಾಗಿತ್ತು. ಬಸ್ಸಿನ ಪ್ರಯಾಣ ದರವನ್ನು ಕಾರ್ಮಿಕರೇ ಭರಿಸಿದ್ದರು. ಹೊರ ಜಿಲ್ಲೆಗಳ ಕಾರ್ಮಿಕರ ಜೊತೆ ನಗರದ ಹೆಬ್ಬಾಳ, ಜಯನಗರ, ನಾಗರಬಾವಿ, ಸುಂಕದಕಟ್ಟೆ ಹಾಗೂ ಸುತ್ತಮುತ್ತ ನೆಲೆಸಿದ್ದ ಕಾರ್ಮಿಕನ್ನೂ ಊರಿಗೆ ಕಳುಹಿಸಲಾಯಿತು.</p>.<p>ಮಧ್ಯಾಹ್ನ 4 ಗಂಟೆ ಹಾಗೂ ಸಂಜೆ 6 ಗಂಟೆಗೆ ಹೊರಡಬೇಕಿದ್ದ ರೈಲುಗಳು ತಡವಾಗಿ ಪ್ರಯಾಣ ಆರಂಭಿಸಿದವು. ಹೊರ ಜಿಲ್ಲೆಗಳ ಕಾರ್ಮಿಕರು ಮಧ್ಯಾಹ್ನವೇ ನಿಲ್ದಾಣಕ್ಕೆ ಬಂದಿದ್ದರಿಂದ ಊಟಕ್ಕೆ ಪರದಾಡುವಂತಾಯಿತು. ಕಾರ್ಮಿಕ ಇಲಾಖೆ ಸಿಬ್ಬಂದಿ ಕೆಲ ಕಾರ್ಮಿಕರಿಗೆ ಆಹಾರದ ಪೊಟ್ಟಣ ವಿತರಿಸಿದರು.</p>.<p>ಲಾಕ್ಡೌನ್ ವೇಳೆ ಅನುಭವಿಸಿದ ಯಾತನೆ ಬಿಚ್ಚಿಟ್ಟ ಕಾರ್ಮಿಕ ಚಂದ್ರಧರ್, ‘6 ವರ್ಷಗಳಿಂದ ಚಿತ್ರದುರ್ಗದಲ್ಲಿ ಶೆಡ್ ಹಾಕಿಕೊಂಡು ವಾಸವಿದ್ದೆ. ಲಾಕ್ಡೌನ್ ಆದಾಗಿನಿಂದ ಸರ್ಕಾರದ ಯಾವ ಸೌಲಭ್ಯಗಳೂ ನಮಗೆ ದೊರೆಯಲಿಲ್ಲ. ಆಹಾರದ ಕಿಟ್ಗಳೂ ಸಿಗಲಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong>ಬೆಂಗಳೂರು ಮಾತ್ರವಲ್ಲದೇ ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿದ್ದ ಉತ್ತರ ಭಾರತದ ರಾಜ್ಯಗಳ ವಲಸೆ ಕಾರ್ಮಿಕರು ಶ್ರಮಿಕ್ ರೈಲಿನಲ್ಲಿ ಸೋಮವಾರ ತಾಯ್ನಾಡಿನತ್ತ ಪ್ರಯಾಣ ಬೆಳೆಸಿದರು.</p>.<p>ಬೆಂಗಳೂರು ಹೊರವಲಯದ ಚಿಕ್ಕಬಾಣಾವರ ರೈಲು ನಿಲ್ದಾಣದಿಂದ ಎರಡು ರೈಲುಗಳಲ್ಲಿ ಕಾರ್ಮಿಕರನ್ನು ಬೀಳ್ಕೊಡಲಾಯಿತು.</p>.<p>ಕೆಎಸ್ಆರ್ಟಿಸಿ ಬಸ್ಗಳ ಮೂಲಕ 3000ಕ್ಕೂ ಹೆಚ್ಚು ಕಾರ್ಮಿಕರನ್ನು ನಿಲ್ದಾಣಕ್ಕೆ ಕರೆತರಲಾಗಿತ್ತು. ಬಸ್ಸಿನ ಪ್ರಯಾಣ ದರವನ್ನು ಕಾರ್ಮಿಕರೇ ಭರಿಸಿದ್ದರು. ಹೊರ ಜಿಲ್ಲೆಗಳ ಕಾರ್ಮಿಕರ ಜೊತೆ ನಗರದ ಹೆಬ್ಬಾಳ, ಜಯನಗರ, ನಾಗರಬಾವಿ, ಸುಂಕದಕಟ್ಟೆ ಹಾಗೂ ಸುತ್ತಮುತ್ತ ನೆಲೆಸಿದ್ದ ಕಾರ್ಮಿಕನ್ನೂ ಊರಿಗೆ ಕಳುಹಿಸಲಾಯಿತು.</p>.<p>ಮಧ್ಯಾಹ್ನ 4 ಗಂಟೆ ಹಾಗೂ ಸಂಜೆ 6 ಗಂಟೆಗೆ ಹೊರಡಬೇಕಿದ್ದ ರೈಲುಗಳು ತಡವಾಗಿ ಪ್ರಯಾಣ ಆರಂಭಿಸಿದವು. ಹೊರ ಜಿಲ್ಲೆಗಳ ಕಾರ್ಮಿಕರು ಮಧ್ಯಾಹ್ನವೇ ನಿಲ್ದಾಣಕ್ಕೆ ಬಂದಿದ್ದರಿಂದ ಊಟಕ್ಕೆ ಪರದಾಡುವಂತಾಯಿತು. ಕಾರ್ಮಿಕ ಇಲಾಖೆ ಸಿಬ್ಬಂದಿ ಕೆಲ ಕಾರ್ಮಿಕರಿಗೆ ಆಹಾರದ ಪೊಟ್ಟಣ ವಿತರಿಸಿದರು.</p>.<p>ಲಾಕ್ಡೌನ್ ವೇಳೆ ಅನುಭವಿಸಿದ ಯಾತನೆ ಬಿಚ್ಚಿಟ್ಟ ಕಾರ್ಮಿಕ ಚಂದ್ರಧರ್, ‘6 ವರ್ಷಗಳಿಂದ ಚಿತ್ರದುರ್ಗದಲ್ಲಿ ಶೆಡ್ ಹಾಕಿಕೊಂಡು ವಾಸವಿದ್ದೆ. ಲಾಕ್ಡೌನ್ ಆದಾಗಿನಿಂದ ಸರ್ಕಾರದ ಯಾವ ಸೌಲಭ್ಯಗಳೂ ನಮಗೆ ದೊರೆಯಲಿಲ್ಲ. ಆಹಾರದ ಕಿಟ್ಗಳೂ ಸಿಗಲಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>